Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...