Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...