Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...