Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...