Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...