Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....