Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...