Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...