Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...