Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...