Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...