Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...