Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...