Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...