Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...