Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...