Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...