Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...