Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....