Homeಮುಖಪುಟಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವಲ್ಲಿ 'ಏನು ತಪ್ಪಾಗಿದೆ' - ಉತ್ತರಾಖಂಡ ಹೈಕೋರ್ಟ್

ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವಲ್ಲಿ ‘ಏನು ತಪ್ಪಾಗಿದೆ’ – ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ಉತ್ತರಾಖಂಡ ಸರ್ಕಾರ ಜಾರಿ ತಂದಿರುವ 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಉತ್ತರಾಖಂಡ ಹೈಕೋರ್ಟ್, ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸಿದರೆ “ಏನು ತಪ್ಪಿದೆ” ಎಂದು ಕೇಳಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜನವರಿ 27 ರಂದು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದಿತ್ತು. ಉತ್ತರಾಖಂಡದೊಳಗೆ ಲಿವ್-ಇನ್ ಸಂಬಂಧದಲ್ಲಿರುವ ಎಲ್ಲಾ ವ್ಯಕ್ತಿಗಳು ಹಾಗೂ ತಾತ್ಕಾಲಿಕವಾಗಿ ಹೊರಗೆ ವಾಸಿಸುವ ರಾಜ್ಯದ ಎಲ್ಲಾ ನಿವಾಸಿಗಳು ತಮ್ಮ ಸಂಬಂಧಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಈ ಕಾನೂನು ಆದೇಶಿಸುತ್ತದೆ.

ಕಾನೂನ ಪ್ರಕಾರ, ಲಿವ್-ಇನ್ ಸಂಬಂಧವನ್ನು ನೋಂದಾಯಿಸಲು ವಿಫಲವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 10,000 ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಕಾನೂನು ಲಿವ್-ಇನ್ ಸಂಬಂಧಗಳಲ್ಲಿ ಏರ್ಪಡುವುದನ್ನು ಹೆಚ್ಚು ಕಷ್ಟಕರವಾಗಿಸುವ ಮೂಲಕ, ಅದನ್ನು ನಿಯಂತ್ರಿಸುತ್ತದೆ. ಇಂತಹ ನಿಯಂತ್ರಣವು ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಕುಟುಂಬ ಕಾನೂನು ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರರು ಎಚ್ಚರಿಸಿದ್ದಾರೆ.

ಅಲ್ಮಾಸುದ್ದೀನ್ ಸಿದ್ದಿಕಿ ಮತ್ತು ಇಕ್ರಮ್ ಎಂಬ ಇಬ್ಬರು ವ್ಯಕ್ತಿಗಳು ಹೈಕೋರ್ಟ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪ್ರಶ್ನಿಸಿ, ಮುಸ್ಲಿಮರು ಮತ್ತು ಇತರ ನಾಗರಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಮುಸ್ಲಿಂ ಸಮುದಾಯದ ಅಗತ್ಯ ಧಾರ್ಮಿಕ ಆಚರಣೆಗಳನ್ನು ಈ ಸಂಹಿತೆ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಬುಧವಾರ, ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಜಿ ನರೇಂದರ್ ಅವರ ಪೀಠವು ಲಿವ್-ಇನ್ ಸಂಬಂಧಗಳನ್ನು ನೋಂದಾಯಿಸದ ಕಾರಣ “ಅಪಘಾತ” ಉಂಟಾಗುತ್ತದೆ ಎಂದು ಹೇಳಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಸಂಬಂಧ ಮುರಿದುಬಿದ್ದರೆ ಏನು ಮಾಡುವುದು? ಈ ಸಂಬಂಧದಿಂದ ಮಗು ಉಂಟಾದರೆ ಏನು ಮಾಡಬೇಕು? ಮದುವೆಗೆ ಸಂಬಂಧಿಸಿದಂತೆ, ಪಿತೃತ್ವದ ಬಗ್ಗೆ ಒಂದು ಊಹೆ ಇದೆ, ಆದರೆ ಲಿವ್-ಇನ್ ಸಂಬಂಧದಲ್ಲಿ, ಆ ಊಹೆ ಎಲ್ಲಿದೆ?” ಎಂದು ನ್ಯಾಯಮೂರ್ತಿ ನರೇಂದರ್ ಕೇಳಿದ್ದಾರೆ.

ಮಹಿಳೆಯರನ್ನು ಕೌಟುಂಬಿಕ ಹಿಂಸಾಚಾರದಿಂದ ರಕ್ಷಿಸುವ ಕಾನೂನಿನಡಿಯಲ್ಲಿ ಲಿವ್-ಇನ್ ಸಂಬಂಧಗಳನ್ನು ಗುರುತಿಸಲಾಗಿದ್ದರೂ, ಅಂತಹ ಸಂಬಂಧಗಳ ನೋಂದಣಿ ಪಿತೃತ್ವವನ್ನು ಸಾಬೀತುಪಡಿಸುವ ವಿಷಯಗಳಲ್ಲಿ ಸಹಾಯಕವಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಉತ್ತರಾಖಂಡ ಮತ್ತು ಕೇಂದ್ರ ಎರಡನ್ನೂ ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಲಿವ್-ಇನ್ ಸಂಬಂಧಗಳ ನೋಂದಣಿ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಕೇಂದ್ರ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ. ಪ್ರಸ್ತುತ ದೇಶದಲ್ಲಿ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳು ಇವುಗಳನ್ನು ಬೇರೇ ಬೇರೆ ಸಂಪ್ರದಾಯ ಮತ್ತು ಕಾನೂಗಳ ಪ್ರಕಾರ ಇವುಗಳನ್ನು ನಡೆಸುತ್ತದೆ. ಇದನ್ನು ವೈಯಕ್ತಿಕ ವ್ಯವಹಾರಗಳು ಎಂದು ಪರಿಗಣಿಸುತ್ತಿದ್ದು, ವಿವಿಧ ಸಮುದಾಯಗಳು ನಿರ್ದಿಷ್ಟ ಕಾನೂನುಗಳನ್ನು ಆಧರಿಸಿ ಮಾಡುತ್ತದೆ. ಅದರಲ್ಲೂ ಹೆಚ್ಚಾಗಿ ಧಾರ್ಮಿಕ ಗ್ರಂಥಗಗಳ ಆಧಾರದಲ್ಲಿ ಇವುಗಳನ್ನು ಮಾಡಲಾಗುತ್ತದೆ.

ಏಕ ರೂಪ ನಾಗರಿಕ ಸಂಹಿತೆಯ ನಿಯಮದಂತೆ ಒಟ್ಟಿಗೆ ವಾಸಿಸುವ ಜೋಡಿಗಳು(ಲಿವ್ ಇನ್ ರಿಲೇಷನ್‌ಶಿಪ್) ತಮ್ಮ ಸಂಬಂಧವನ್ನು ನೋಂದಾಯಿಸಲು 16 ಪುಟಗಳ ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ. ಈ ಪ್ರಕ್ರಿಯೆಗೆ ಅವರು ತಮ್ಮ ಆಧಾರ್ ಕಾರ್ಡ್‌ಗಳು, ಹಿಂದಿನ ವೈವಾಹಿಕ ಸಂಬಂಧಗಳ ವಿವರಗಳು ಅಥವಾ ಲಿವ್-ಇನ್ ಸಂಬಂಧಗಳನ್ನು ಕೊನೆಗೊಳಿಸುವುದು ಮತ್ತು ಅವರ ಮನೆಮಾಲೀಕರ ಹೆಸರು ಮತ್ತು ಸಂಪರ್ಕ ಸೇರಿದಂತೆ ರಾಜ್ಯ ಸರ್ಕಾರಕ್ಕೆ ದಾಖಲೆಗಳ ದೀರ್ಘ ಪಟ್ಟಿಯನ್ನು ನೀಡುವ ಅಗತ್ಯವಿದೆ.

ರಾಜ್ಯದ ಏಕರೂಪ ನಾಗರಿಕ ಸಂಹಿತೆಯ ಅಡಿಯಲ್ಲಿ ಅವರು “ನಿಷೇಧಿತ ಸಂಬಂಧಗಳ ಮಟ್ಟ”ಕ್ಕೆ ಒಳಪಟ್ಟರೆ, ಅಂದರೆ ಅವರು ರಕ್ತ ಸಂಬಂಧಿಗಳಾಗಿದ್ದರೆ, ಅವರು ಮದುವೆಯಾಗಲು ಅರ್ಹರು ಎಂದು ಹೇಳುವ ಧಾರ್ಮಿಕ ಮುಖಂಡರಿಂದ ಪ್ರಮಾಣಪತ್ರವನ್ನು ಪಡೆಯಬೇಕಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಿಜೆಪಿಯ ಕಾರ್ಯಸೂಚಿಯಾಗಿದ್ದು, ಪಕ್ಷವು ಆಳುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರಲು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಗಾಗಿ ತನ್ನ ಅಭಿಯಾನದಲ್ಲಿ, ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಮುಸ್ಲಿರು ಬಹುಪತ್ನಿತ್ವವನ್ನು ಆಚರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ಮಾಡಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅವಕಾಶ ನೀಡುವ ಮೂಲಕ ಮಹಿಳೆಯರ ವಿರುದ್ಧ ತಾರತಮ್ಯ ಮಾಡಿದೆ ಎಂದು ವಾದಿಸಿತ್ತು.

ಕಾನೂನು ತಜ್ಞರು ಈ ಸಂಹಿತೆಯು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಬಂದಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂಓದಿ:  ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ

ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...