Homeಮುಖಪುಟಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವಲ್ಲಿ 'ಏನು ತಪ್ಪಾಗಿದೆ' - ಉತ್ತರಾಖಂಡ ಹೈಕೋರ್ಟ್

ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವಲ್ಲಿ ‘ಏನು ತಪ್ಪಾಗಿದೆ’ – ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ಉತ್ತರಾಖಂಡ ಸರ್ಕಾರ ಜಾರಿ ತಂದಿರುವ 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಉತ್ತರಾಖಂಡ ಹೈಕೋರ್ಟ್, ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸಿದರೆ “ಏನು ತಪ್ಪಿದೆ” ಎಂದು ಕೇಳಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜನವರಿ 27 ರಂದು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದಿತ್ತು. ಉತ್ತರಾಖಂಡದೊಳಗೆ ಲಿವ್-ಇನ್ ಸಂಬಂಧದಲ್ಲಿರುವ ಎಲ್ಲಾ ವ್ಯಕ್ತಿಗಳು ಹಾಗೂ ತಾತ್ಕಾಲಿಕವಾಗಿ ಹೊರಗೆ ವಾಸಿಸುವ ರಾಜ್ಯದ ಎಲ್ಲಾ ನಿವಾಸಿಗಳು ತಮ್ಮ ಸಂಬಂಧಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಈ ಕಾನೂನು ಆದೇಶಿಸುತ್ತದೆ.

ಕಾನೂನ ಪ್ರಕಾರ, ಲಿವ್-ಇನ್ ಸಂಬಂಧವನ್ನು ನೋಂದಾಯಿಸಲು ವಿಫಲವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 10,000 ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಕಾನೂನು ಲಿವ್-ಇನ್ ಸಂಬಂಧಗಳಲ್ಲಿ ಏರ್ಪಡುವುದನ್ನು ಹೆಚ್ಚು ಕಷ್ಟಕರವಾಗಿಸುವ ಮೂಲಕ, ಅದನ್ನು ನಿಯಂತ್ರಿಸುತ್ತದೆ. ಇಂತಹ ನಿಯಂತ್ರಣವು ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಕುಟುಂಬ ಕಾನೂನು ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರರು ಎಚ್ಚರಿಸಿದ್ದಾರೆ.

ಅಲ್ಮಾಸುದ್ದೀನ್ ಸಿದ್ದಿಕಿ ಮತ್ತು ಇಕ್ರಮ್ ಎಂಬ ಇಬ್ಬರು ವ್ಯಕ್ತಿಗಳು ಹೈಕೋರ್ಟ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪ್ರಶ್ನಿಸಿ, ಮುಸ್ಲಿಮರು ಮತ್ತು ಇತರ ನಾಗರಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಮುಸ್ಲಿಂ ಸಮುದಾಯದ ಅಗತ್ಯ ಧಾರ್ಮಿಕ ಆಚರಣೆಗಳನ್ನು ಈ ಸಂಹಿತೆ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಬುಧವಾರ, ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಜಿ ನರೇಂದರ್ ಅವರ ಪೀಠವು ಲಿವ್-ಇನ್ ಸಂಬಂಧಗಳನ್ನು ನೋಂದಾಯಿಸದ ಕಾರಣ “ಅಪಘಾತ” ಉಂಟಾಗುತ್ತದೆ ಎಂದು ಹೇಳಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಸಂಬಂಧ ಮುರಿದುಬಿದ್ದರೆ ಏನು ಮಾಡುವುದು? ಈ ಸಂಬಂಧದಿಂದ ಮಗು ಉಂಟಾದರೆ ಏನು ಮಾಡಬೇಕು? ಮದುವೆಗೆ ಸಂಬಂಧಿಸಿದಂತೆ, ಪಿತೃತ್ವದ ಬಗ್ಗೆ ಒಂದು ಊಹೆ ಇದೆ, ಆದರೆ ಲಿವ್-ಇನ್ ಸಂಬಂಧದಲ್ಲಿ, ಆ ಊಹೆ ಎಲ್ಲಿದೆ?” ಎಂದು ನ್ಯಾಯಮೂರ್ತಿ ನರೇಂದರ್ ಕೇಳಿದ್ದಾರೆ.

ಮಹಿಳೆಯರನ್ನು ಕೌಟುಂಬಿಕ ಹಿಂಸಾಚಾರದಿಂದ ರಕ್ಷಿಸುವ ಕಾನೂನಿನಡಿಯಲ್ಲಿ ಲಿವ್-ಇನ್ ಸಂಬಂಧಗಳನ್ನು ಗುರುತಿಸಲಾಗಿದ್ದರೂ, ಅಂತಹ ಸಂಬಂಧಗಳ ನೋಂದಣಿ ಪಿತೃತ್ವವನ್ನು ಸಾಬೀತುಪಡಿಸುವ ವಿಷಯಗಳಲ್ಲಿ ಸಹಾಯಕವಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಉತ್ತರಾಖಂಡ ಮತ್ತು ಕೇಂದ್ರ ಎರಡನ್ನೂ ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಲಿವ್-ಇನ್ ಸಂಬಂಧಗಳ ನೋಂದಣಿ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಕೇಂದ್ರ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ. ಪ್ರಸ್ತುತ ದೇಶದಲ್ಲಿ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳು ಇವುಗಳನ್ನು ಬೇರೇ ಬೇರೆ ಸಂಪ್ರದಾಯ ಮತ್ತು ಕಾನೂಗಳ ಪ್ರಕಾರ ಇವುಗಳನ್ನು ನಡೆಸುತ್ತದೆ. ಇದನ್ನು ವೈಯಕ್ತಿಕ ವ್ಯವಹಾರಗಳು ಎಂದು ಪರಿಗಣಿಸುತ್ತಿದ್ದು, ವಿವಿಧ ಸಮುದಾಯಗಳು ನಿರ್ದಿಷ್ಟ ಕಾನೂನುಗಳನ್ನು ಆಧರಿಸಿ ಮಾಡುತ್ತದೆ. ಅದರಲ್ಲೂ ಹೆಚ್ಚಾಗಿ ಧಾರ್ಮಿಕ ಗ್ರಂಥಗಗಳ ಆಧಾರದಲ್ಲಿ ಇವುಗಳನ್ನು ಮಾಡಲಾಗುತ್ತದೆ.

ಏಕ ರೂಪ ನಾಗರಿಕ ಸಂಹಿತೆಯ ನಿಯಮದಂತೆ ಒಟ್ಟಿಗೆ ವಾಸಿಸುವ ಜೋಡಿಗಳು(ಲಿವ್ ಇನ್ ರಿಲೇಷನ್‌ಶಿಪ್) ತಮ್ಮ ಸಂಬಂಧವನ್ನು ನೋಂದಾಯಿಸಲು 16 ಪುಟಗಳ ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ. ಈ ಪ್ರಕ್ರಿಯೆಗೆ ಅವರು ತಮ್ಮ ಆಧಾರ್ ಕಾರ್ಡ್‌ಗಳು, ಹಿಂದಿನ ವೈವಾಹಿಕ ಸಂಬಂಧಗಳ ವಿವರಗಳು ಅಥವಾ ಲಿವ್-ಇನ್ ಸಂಬಂಧಗಳನ್ನು ಕೊನೆಗೊಳಿಸುವುದು ಮತ್ತು ಅವರ ಮನೆಮಾಲೀಕರ ಹೆಸರು ಮತ್ತು ಸಂಪರ್ಕ ಸೇರಿದಂತೆ ರಾಜ್ಯ ಸರ್ಕಾರಕ್ಕೆ ದಾಖಲೆಗಳ ದೀರ್ಘ ಪಟ್ಟಿಯನ್ನು ನೀಡುವ ಅಗತ್ಯವಿದೆ.

ರಾಜ್ಯದ ಏಕರೂಪ ನಾಗರಿಕ ಸಂಹಿತೆಯ ಅಡಿಯಲ್ಲಿ ಅವರು “ನಿಷೇಧಿತ ಸಂಬಂಧಗಳ ಮಟ್ಟ”ಕ್ಕೆ ಒಳಪಟ್ಟರೆ, ಅಂದರೆ ಅವರು ರಕ್ತ ಸಂಬಂಧಿಗಳಾಗಿದ್ದರೆ, ಅವರು ಮದುವೆಯಾಗಲು ಅರ್ಹರು ಎಂದು ಹೇಳುವ ಧಾರ್ಮಿಕ ಮುಖಂಡರಿಂದ ಪ್ರಮಾಣಪತ್ರವನ್ನು ಪಡೆಯಬೇಕಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಿಜೆಪಿಯ ಕಾರ್ಯಸೂಚಿಯಾಗಿದ್ದು, ಪಕ್ಷವು ಆಳುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರಲು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಗಾಗಿ ತನ್ನ ಅಭಿಯಾನದಲ್ಲಿ, ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಮುಸ್ಲಿರು ಬಹುಪತ್ನಿತ್ವವನ್ನು ಆಚರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ಮಾಡಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅವಕಾಶ ನೀಡುವ ಮೂಲಕ ಮಹಿಳೆಯರ ವಿರುದ್ಧ ತಾರತಮ್ಯ ಮಾಡಿದೆ ಎಂದು ವಾದಿಸಿತ್ತು.

ಕಾನೂನು ತಜ್ಞರು ಈ ಸಂಹಿತೆಯು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಬಂದಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂಓದಿ:  ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ

ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...