Homeಮುಖಪುಟಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

ಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

- Advertisement -
- Advertisement -

ಲಿವ್-ಇನ್ ಸಂಬಂಧಗಳು ‘ಅಪಾಯಕಾರಿ ಕಾಯಿಲೆ’ಯಾಗಿದೆ. ಇದರ ವಿರುದ್ಧ ಕಾನೂನು ರೂಪಿಸಬೇಕು. ಸಮಾಜದಿಂದ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹರಿಯಾಣದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಧರಂಬೀರ್ ಸಿಂಗ್, “ಪ್ರೇಮ ವಿವಾಹಗಳಲ್ಲಿ ವಿಚ್ಛೇದನದ ಪ್ರಮಾಣ ಹೆಚ್ಚಾಗುತ್ತಿದ್ದು, ವಧು-ವರರ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾನು ಅತ್ಯಂತ ಗಂಭೀರವಾದ ವಿಷಯವನ್ನು ಸರ್ಕಾರ ಮತ್ತು ಸಂಸತ್ತಿನ ಗಮನಕ್ಕೆ ತರಲು ಬಯಸುತ್ತೇನೆ. ಭಾರತೀಯ ಸಂಸ್ಕೃತಿಯು ‘ವಸುಧೈವ ಕುಟುಂಬ’ಕಂ (ಜಗತ್ತು ಒಂದು ಕುಟುಂಬ) ಮತ್ತು ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರರಿಗಿಂತ ಭಿನ್ನವಾಗಿದೆ. ನಮ್ಮ ವೈವಿಧ್ಯತೆಯಲ್ಲಿ ಏಕತೆಗೆ ಇಡೀ ಜಗತ್ತು ಪ್ರಭಾವಿತವಾಗಿದೆ ಎಂದು” ಭಿವಾನಿ-ಮಹೇಂದ್ರಗಢದ ಸಂಸದ ಧರಂಬೀರ್ ಸಿಂಗ್ ಹೇಳಿದ್ದಾರೆ.

“ಭಾರತವು ಅರೇಂಜ್ಡ್ ಮ್ಯಾರೇಜ್‌ಗಳ ಸುದೀರ್ಘ ಸಂಪ್ರದಾಯವನ್ನು ಹೊಂದಿದೆ. ಸಮಾಜದ ದೊಡ್ಡ ವರ್ಗವು ಇಂದಿಗೂ ಪೋಷಕರು ಅಥವಾ ಸಂಬಂಧಿಕರು ನಿಶ್ವಯಿಸುವ ಮದುವೆಗಳಿಗೆ ಆದ್ಯತೆ ನೀಡುತ್ತಿವೆ. ಇದು ವಧು ಮತ್ತು ವರನ ಒಪ್ಪಿಗೆಯನ್ನು ಹೊಂದಿದೆ. ವಿವಾಹಗಳು ಸಾಮಾಜಿಕ, ವೈಯಕ್ತಿಕ ಮೌಲ್ಯಗಳು, ಇಷ್ಟಗಳು ಮತ್ತು ಕೌಟುಂಬಿಕ ಹಿನ್ನೆಲೆಗಳಂತಹ ಹಲವಾರು ಸಾಮಾನ್ಯ ಅಂಶಗಳ ಹೊಂದಾಣಿಕೆಯನ್ನು ಆಧರಿಸಿವೆ” ಎಂದು ಧರಂಬೀರ್ ಸಿಂಗ್ ಹೇಳಿದ್ದಾರೆ.

“ಮದುವೆಯು ಏಳು ತಲೆಮಾರುಗಳವರೆಗೆ ಮುಂದುವರಿಯುವ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ವಿಚ್ಛೇದನದ ಪ್ರಮಾಣವು ಸುಮಾರು 40 ಪ್ರತಿಶತದಷ್ಟಿದೆ. ಅರೇಂಜ್ಡ್ ಮ್ಯಾರೇಜ್‌ಗಳಲ್ಲಿ ವಿಚ್ಛೇದನದ ದರ ತೀರಾ ಕಡಿಮೆ ಇರುತ್ತದೆ. ಆದರೆ, ಇತ್ತೀಚೆಗೆ ವಿಚ್ಛೇದನದ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರೇಮ ವಿವಾಹಗಳು” ಎಂದು ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಪ್ರೇಮ ವಿವಾಹಗಳಲ್ಲಿ ವಧು-ವರರ ತಾಯಿ ಮತ್ತು ತಂದೆಯ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕೆಂದು ನನ್ನ ಸಲಹೆಯಾಗಿದೆ. ಏಕೆಂದರೆ ದೇಶದ ಹೆಚ್ಚಿನ ಭಾಗಗಳಲ್ಲಿ ಒಂದೇ ‘ಗೋತ್ರ’ದಲ್ಲಿ ವಿವಾಹಗಳು ನಡೆಯುವುದಿಲ್ಲ. ಪ್ರೇಮ ವಿವಾಹಗಳ ಕಾರಣದಿಂದಾಗಿ ಹಳ್ಳಿಗಳಲ್ಲಿ ಸಾಕಷ್ಟು ಸಂಘರ್ಷಗಳಿಂದ ಹಲವಾರು ಕುಟುಂಬಗಳು ನಾಶವಾಗುತ್ತಿವೆ. ಆದ್ದರಿಂದ, ಎರಡೂ ಕುಟುಂಬಗಳ ಒಪ್ಪಿಗೆ ಮುಖ್ಯವಾಗಿದೆ. ಈಗ ಹೊಸ ಕಾಯಿಲೆ ಶುರುವಾಗಿದೆ. ಈ ಸಾಮಾಜಿಕ ಅನಿಷ್ಟವನ್ನು “ಲಿವ್-ಇನ್ ಸಂಬಂಧ” ಎಂದು ಕರೆಯಲಾಗುತ್ತದೆ. ಇದರ ಅಡಿಯಲ್ಲಿ ಇಬ್ಬರು ವ್ಯಕ್ತಿಗಳು, ಪುರುಷ ಅಥವಾ ಮಹಿಳೆ ವಿವಾಹವಾಗದೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇಂತಹ ಸಂಬಂಧಗಳು ತುಂಬಾ ಸಾಮಾನ್ಯವಾಗಿದೆ. ನಮ್ಮ ಸಮಾಜದಲ್ಲಿ ಈ ರೋಗ ವೇಗವಾಗಿ ಹರಡುತ್ತಿದೆ. ಇದರ ಪರಿಣಾಮಗಳು ಭಯಾನಕವಾಗಿವೆ. ಇತ್ತೀಚೆಗೆ, ಶ್ರದ್ಧಾ ವಾಲ್ಕರ್ ಮತ್ತು ಅಫ್ತಾಬ್ ಪೂನಾವಾಲಾ ಪ್ರಕರಣವು ಬೆಳಕಿಗೆ ಬಂದಿತ್ತು. ಅವರಿಬ್ಬರು ಲೀವ್ ಇನ್‌ ನಲ್ಲಿ ಇದ್ದರು” ಎಂದು ಸಿಂಗ್ ಹೇಳಿದ್ದಾರೆ.

ಇದನ್ನು ಓದಿ : ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಟಿಎಂಸಿ ಸಂಸದೆಯರಿಂದ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...