Homeಮುಖಪುಟಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

ಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

- Advertisement -
- Advertisement -

ಲಿವ್-ಇನ್ ಸಂಬಂಧಗಳು ‘ಅಪಾಯಕಾರಿ ಕಾಯಿಲೆ’ಯಾಗಿದೆ. ಇದರ ವಿರುದ್ಧ ಕಾನೂನು ರೂಪಿಸಬೇಕು. ಸಮಾಜದಿಂದ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹರಿಯಾಣದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಧರಂಬೀರ್ ಸಿಂಗ್, “ಪ್ರೇಮ ವಿವಾಹಗಳಲ್ಲಿ ವಿಚ್ಛೇದನದ ಪ್ರಮಾಣ ಹೆಚ್ಚಾಗುತ್ತಿದ್ದು, ವಧು-ವರರ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾನು ಅತ್ಯಂತ ಗಂಭೀರವಾದ ವಿಷಯವನ್ನು ಸರ್ಕಾರ ಮತ್ತು ಸಂಸತ್ತಿನ ಗಮನಕ್ಕೆ ತರಲು ಬಯಸುತ್ತೇನೆ. ಭಾರತೀಯ ಸಂಸ್ಕೃತಿಯು ‘ವಸುಧೈವ ಕುಟುಂಬ’ಕಂ (ಜಗತ್ತು ಒಂದು ಕುಟುಂಬ) ಮತ್ತು ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರರಿಗಿಂತ ಭಿನ್ನವಾಗಿದೆ. ನಮ್ಮ ವೈವಿಧ್ಯತೆಯಲ್ಲಿ ಏಕತೆಗೆ ಇಡೀ ಜಗತ್ತು ಪ್ರಭಾವಿತವಾಗಿದೆ ಎಂದು” ಭಿವಾನಿ-ಮಹೇಂದ್ರಗಢದ ಸಂಸದ ಧರಂಬೀರ್ ಸಿಂಗ್ ಹೇಳಿದ್ದಾರೆ.

“ಭಾರತವು ಅರೇಂಜ್ಡ್ ಮ್ಯಾರೇಜ್‌ಗಳ ಸುದೀರ್ಘ ಸಂಪ್ರದಾಯವನ್ನು ಹೊಂದಿದೆ. ಸಮಾಜದ ದೊಡ್ಡ ವರ್ಗವು ಇಂದಿಗೂ ಪೋಷಕರು ಅಥವಾ ಸಂಬಂಧಿಕರು ನಿಶ್ವಯಿಸುವ ಮದುವೆಗಳಿಗೆ ಆದ್ಯತೆ ನೀಡುತ್ತಿವೆ. ಇದು ವಧು ಮತ್ತು ವರನ ಒಪ್ಪಿಗೆಯನ್ನು ಹೊಂದಿದೆ. ವಿವಾಹಗಳು ಸಾಮಾಜಿಕ, ವೈಯಕ್ತಿಕ ಮೌಲ್ಯಗಳು, ಇಷ್ಟಗಳು ಮತ್ತು ಕೌಟುಂಬಿಕ ಹಿನ್ನೆಲೆಗಳಂತಹ ಹಲವಾರು ಸಾಮಾನ್ಯ ಅಂಶಗಳ ಹೊಂದಾಣಿಕೆಯನ್ನು ಆಧರಿಸಿವೆ” ಎಂದು ಧರಂಬೀರ್ ಸಿಂಗ್ ಹೇಳಿದ್ದಾರೆ.

“ಮದುವೆಯು ಏಳು ತಲೆಮಾರುಗಳವರೆಗೆ ಮುಂದುವರಿಯುವ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ವಿಚ್ಛೇದನದ ಪ್ರಮಾಣವು ಸುಮಾರು 40 ಪ್ರತಿಶತದಷ್ಟಿದೆ. ಅರೇಂಜ್ಡ್ ಮ್ಯಾರೇಜ್‌ಗಳಲ್ಲಿ ವಿಚ್ಛೇದನದ ದರ ತೀರಾ ಕಡಿಮೆ ಇರುತ್ತದೆ. ಆದರೆ, ಇತ್ತೀಚೆಗೆ ವಿಚ್ಛೇದನದ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರೇಮ ವಿವಾಹಗಳು” ಎಂದು ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಪ್ರೇಮ ವಿವಾಹಗಳಲ್ಲಿ ವಧು-ವರರ ತಾಯಿ ಮತ್ತು ತಂದೆಯ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕೆಂದು ನನ್ನ ಸಲಹೆಯಾಗಿದೆ. ಏಕೆಂದರೆ ದೇಶದ ಹೆಚ್ಚಿನ ಭಾಗಗಳಲ್ಲಿ ಒಂದೇ ‘ಗೋತ್ರ’ದಲ್ಲಿ ವಿವಾಹಗಳು ನಡೆಯುವುದಿಲ್ಲ. ಪ್ರೇಮ ವಿವಾಹಗಳ ಕಾರಣದಿಂದಾಗಿ ಹಳ್ಳಿಗಳಲ್ಲಿ ಸಾಕಷ್ಟು ಸಂಘರ್ಷಗಳಿಂದ ಹಲವಾರು ಕುಟುಂಬಗಳು ನಾಶವಾಗುತ್ತಿವೆ. ಆದ್ದರಿಂದ, ಎರಡೂ ಕುಟುಂಬಗಳ ಒಪ್ಪಿಗೆ ಮುಖ್ಯವಾಗಿದೆ. ಈಗ ಹೊಸ ಕಾಯಿಲೆ ಶುರುವಾಗಿದೆ. ಈ ಸಾಮಾಜಿಕ ಅನಿಷ್ಟವನ್ನು “ಲಿವ್-ಇನ್ ಸಂಬಂಧ” ಎಂದು ಕರೆಯಲಾಗುತ್ತದೆ. ಇದರ ಅಡಿಯಲ್ಲಿ ಇಬ್ಬರು ವ್ಯಕ್ತಿಗಳು, ಪುರುಷ ಅಥವಾ ಮಹಿಳೆ ವಿವಾಹವಾಗದೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇಂತಹ ಸಂಬಂಧಗಳು ತುಂಬಾ ಸಾಮಾನ್ಯವಾಗಿದೆ. ನಮ್ಮ ಸಮಾಜದಲ್ಲಿ ಈ ರೋಗ ವೇಗವಾಗಿ ಹರಡುತ್ತಿದೆ. ಇದರ ಪರಿಣಾಮಗಳು ಭಯಾನಕವಾಗಿವೆ. ಇತ್ತೀಚೆಗೆ, ಶ್ರದ್ಧಾ ವಾಲ್ಕರ್ ಮತ್ತು ಅಫ್ತಾಬ್ ಪೂನಾವಾಲಾ ಪ್ರಕರಣವು ಬೆಳಕಿಗೆ ಬಂದಿತ್ತು. ಅವರಿಬ್ಬರು ಲೀವ್ ಇನ್‌ ನಲ್ಲಿ ಇದ್ದರು” ಎಂದು ಸಿಂಗ್ ಹೇಳಿದ್ದಾರೆ.

ಇದನ್ನು ಓದಿ : ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಟಿಎಂಸಿ ಸಂಸದೆಯರಿಂದ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...