Homeಕರ್ನಾಟಕ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ - ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ – ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

- Advertisement -
- Advertisement -

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಕೊರೊನಾ ಕಾರಣಕ್ಕೆ ಅವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದ ಅವರ ಅಭಿಮಾನಿಗಳಿಗಾಗಿ ಆನ್‌ಲೈನ್‌ ಮೂಲಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರವು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ ಎಚ್.ಎಸ್. ದೊರೆಸ್ವಾಮಿಯವರ ನಿಧನ ನನಗೆ ಆಘಾತ ಉಂಟುಮಾಡಿದೆ.‌ ಮನೆ ಹಿರಿಯನನ್ನು ಕಳೆದುಕೊಂಡ ದುಃಖ ನನ್ನದಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ನಮ್ಮನ್ನು ಅಗಲಿ ಹೋದ ಅವರು ನಮ್ಮೆಲ್ಲರ ಆತ್ಮ ಸಾಕ್ಷಿಯಾಗಿದ್ದರು. ತಪ್ಪು ಕಂಡಾಗ ಎಚ್ಚರಿಸಿ, ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಜಗ್ಗದೆ, ಕುಗ್ಗದೆ ಅನ್ಯಾಯ-ಅಕ್ರಮ‌ ಕಂಡಾಗ ಬೀದಿಗಿಳಿಯುತ್ತಿದ್ದ ಅವರು ಎಲ್ಲರ ಪಾಲಿನ ಸ್ಪೂರ್ತಿಯಾಗಿದ್ದರು” ಎಂದು ಹೇಳಿದ್ದಾರೆ.

ಜೆಡಿಎಸ್‌ ನಾಯಕ ಕುಮಾರಸ್ವಾಮಿ ಅವರು, “ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌‌ ಸೆಂಥಿಲ್ ಅವರು, “ಕೆಲವು ಆತ್ಮಗಳು ನಾಶ ಹೊಂದುವುದಿಲ್ಲ. ನಿಮ್ಮ ಮಾರ್ಗದರ್ಶಕ ಬೆಳಕಿನೊಂದಿಗೆ ನಾವು ಮುಂದುವರಿಯುತ್ತೇವೆ, ಲಾಲ್‌ಸಲಾಮ್‌” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, “ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ಜಾನಪದ ಸಂಶೋಧಕ, ಜೆಎ‌ನ್‌ಯು ಮಾಜಿ ಪ್ರೊಫೆಸರ್‌ ಪುರುಷೋತ್ತಮ ಬಿಳಿಮಲೆ ಅವರು, “ಡಾ. ಎಚ್.ಎಸ್. ದೊರೆಸ್ವಾಮಿ ಶತಮಾನದ ವ್ಯಕ್ತಿ. 20 ನೇ ಶತಮಾನವಿಡೀ ಬದುಕಿ, 21 ನೇ ಶತಮಾನದ ಮೊದಲೆರಡು ದಶಕಗಳನ್ನೂ ಕಂಡು ನಮಗೆಲ್ಲರಿಗೂ ಸ್ಫೂರ್ತಿಯ ಕೇಂದ್ರವಾಗಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸರಕಾರದ ಈಚಿನ ಭೂ ಕಬಳಿಕೆಯ ವಿರುದ್ಧದ ಹೋರಾಟದವರೆಗೂ ಅವರ ಚಟುವಟಿಕೆಗಳ ವ್ಯಾಪ್ತಿ ಹಬ್ಬಿತ್ತು. ಪತ್ರಕರ್ತರಾಗಿಯೂ ಅವರು ಪ್ರಸಿದ್ಧರು. ಗಾಂಧೀ ಹತ್ಯೆಯ ಕೆಲವು ದಿನಗಳ ಮೊದಲು ಗೋಡ್ಸೆ ಬೆಂಗಳೂರಿಗೆ ಬಂದದ್ದನ್ನು ಅವರು ದಾಖಲಿಸಿದ್ದರು’’ ಎಂದು ಹೇಳಿದ್ದಾರೆ.

“ಕರ್ನಾಟಕ ಏಕೀಕರಣಕ್ಕೂ ಅವರು ದುಡಿದಿದ್ದರು. ಇಂದಿರಾಗಾಂಧೀ ಕಾಲದಲ್ಲಿ ತುರ್ತುಪರಿಸ್ಥಿತಿ ವಿರೋಧಿಸಿ ಜೈಲುವಾಸ ಅನುಭವಿಸಿದ್ದ ಅವರು, ಈಚೆಗೆ ವೇಗವಾಗಿ ಬೆಳೆಯುತ್ತಿರುವ ಫ್ಯಾಸಿಸಂನ ವಿರುದ್ಧವೂ ಧ್ವನಿ ಎತ್ತುತ್ತಿದ್ದರು. ʼಗಾಂಧೀ ಮತ್ತು ಅಂಬೇಡ್ಕರ್ ಅವರುಗಳಲ್ಲಿ ಭಿನ್ನಾಭಿಪ್ರಾಯ ಇತ್ತೇ ಹೊರತು ವೈರತ್ವ ಇರಲಿಲ್ಲʼ ಎಂಬ ಅವರ ಮಾತು ನನಗೆ ವೈಯಕ್ತಿಕವಾಗಿ ಬಹಳ ಖುಷಿ ನೀಡಿತ್ತು. ಒಳ್ಳೆಯವರನ್ನೆಲ್ಲಾ ಟ್ರೋಲ್‌ ಮಾಡುವುದನ್ನೇ ಕೆಲಸ ಮಾಡಿಕೊಂಡಿರುವವರ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿತ್ತು. ‘ನಿಮ್ಮ ಬಗ್ಗೆ ಹೀಗೆ ಬರೆದಿದ್ದಾರಲ್ಲಾ?ʼ ಎಂದರೆ ಅಜ್ಜ ನಕ್ಕುಬಿಡುತ್ತಿದ್ದರು! ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು!ನಮನಗಳು ಸಾರ್‌” ಎಂದು ಪುರುಷೋತ್ತಮ ಬಿಳಿಮಲೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಸಂಘಟನೆ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ಅವರು, “ಸರಳ,ಸ್ವಾಭಿಮಾನಿ ಮತ್ತು ಹೋರಾಟವನ್ನೇ ಉಸಿರಾಗಿಸಿಕೊಂಡ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರು” ಎಂದು ಹೇಳಿದ್ದಾರೆ.

ಲೇಖಕಿ ಚೇತನಾ ತೀರ್ಥಹಳ್ಳಿ ಅವರು, “ನಮ್ಮ ಪ್ರೀತಿಯ ‘ಆಂದೋಲನಜೀವಿ’, ಅದಮ್ಯ ಚೇತನ ದೊರೆಸ್ವಾಮಿಯವರು ತಮ್ಮ ಶತಮಾನದ ಬದುಕು ಮುಗಿಸಿದ್ದಾರೆ. ಸದಾ ಶಾಂತಿಯನ್ನೇ ಹಂಚಿದ ದೊರೆಸ್ವಾಮಿಯವರ ಆತ್ಮಕ್ಕೆ ಶಾಂತಿ ದೊರೆಯದೆ ಇರುವುದೆ? ಅದರಲ್ಲೂ ಇವತ್ತು ಬುದ್ಧ ಹುಣ್ಣಿಮೆ!” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು, “ಬೆಳಕು ಆರಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...