Homeಕರ್ನಾಟಕ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ - ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ – ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

- Advertisement -
- Advertisement -

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಕೊರೊನಾ ಕಾರಣಕ್ಕೆ ಅವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದ ಅವರ ಅಭಿಮಾನಿಗಳಿಗಾಗಿ ಆನ್‌ಲೈನ್‌ ಮೂಲಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರವು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ ಎಚ್.ಎಸ್. ದೊರೆಸ್ವಾಮಿಯವರ ನಿಧನ ನನಗೆ ಆಘಾತ ಉಂಟುಮಾಡಿದೆ.‌ ಮನೆ ಹಿರಿಯನನ್ನು ಕಳೆದುಕೊಂಡ ದುಃಖ ನನ್ನದಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ನಮ್ಮನ್ನು ಅಗಲಿ ಹೋದ ಅವರು ನಮ್ಮೆಲ್ಲರ ಆತ್ಮ ಸಾಕ್ಷಿಯಾಗಿದ್ದರು. ತಪ್ಪು ಕಂಡಾಗ ಎಚ್ಚರಿಸಿ, ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಜಗ್ಗದೆ, ಕುಗ್ಗದೆ ಅನ್ಯಾಯ-ಅಕ್ರಮ‌ ಕಂಡಾಗ ಬೀದಿಗಿಳಿಯುತ್ತಿದ್ದ ಅವರು ಎಲ್ಲರ ಪಾಲಿನ ಸ್ಪೂರ್ತಿಯಾಗಿದ್ದರು” ಎಂದು ಹೇಳಿದ್ದಾರೆ.

ಜೆಡಿಎಸ್‌ ನಾಯಕ ಕುಮಾರಸ್ವಾಮಿ ಅವರು, “ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌‌ ಸೆಂಥಿಲ್ ಅವರು, “ಕೆಲವು ಆತ್ಮಗಳು ನಾಶ ಹೊಂದುವುದಿಲ್ಲ. ನಿಮ್ಮ ಮಾರ್ಗದರ್ಶಕ ಬೆಳಕಿನೊಂದಿಗೆ ನಾವು ಮುಂದುವರಿಯುತ್ತೇವೆ, ಲಾಲ್‌ಸಲಾಮ್‌” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, “ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ಜಾನಪದ ಸಂಶೋಧಕ, ಜೆಎ‌ನ್‌ಯು ಮಾಜಿ ಪ್ರೊಫೆಸರ್‌ ಪುರುಷೋತ್ತಮ ಬಿಳಿಮಲೆ ಅವರು, “ಡಾ. ಎಚ್.ಎಸ್. ದೊರೆಸ್ವಾಮಿ ಶತಮಾನದ ವ್ಯಕ್ತಿ. 20 ನೇ ಶತಮಾನವಿಡೀ ಬದುಕಿ, 21 ನೇ ಶತಮಾನದ ಮೊದಲೆರಡು ದಶಕಗಳನ್ನೂ ಕಂಡು ನಮಗೆಲ್ಲರಿಗೂ ಸ್ಫೂರ್ತಿಯ ಕೇಂದ್ರವಾಗಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸರಕಾರದ ಈಚಿನ ಭೂ ಕಬಳಿಕೆಯ ವಿರುದ್ಧದ ಹೋರಾಟದವರೆಗೂ ಅವರ ಚಟುವಟಿಕೆಗಳ ವ್ಯಾಪ್ತಿ ಹಬ್ಬಿತ್ತು. ಪತ್ರಕರ್ತರಾಗಿಯೂ ಅವರು ಪ್ರಸಿದ್ಧರು. ಗಾಂಧೀ ಹತ್ಯೆಯ ಕೆಲವು ದಿನಗಳ ಮೊದಲು ಗೋಡ್ಸೆ ಬೆಂಗಳೂರಿಗೆ ಬಂದದ್ದನ್ನು ಅವರು ದಾಖಲಿಸಿದ್ದರು’’ ಎಂದು ಹೇಳಿದ್ದಾರೆ.

“ಕರ್ನಾಟಕ ಏಕೀಕರಣಕ್ಕೂ ಅವರು ದುಡಿದಿದ್ದರು. ಇಂದಿರಾಗಾಂಧೀ ಕಾಲದಲ್ಲಿ ತುರ್ತುಪರಿಸ್ಥಿತಿ ವಿರೋಧಿಸಿ ಜೈಲುವಾಸ ಅನುಭವಿಸಿದ್ದ ಅವರು, ಈಚೆಗೆ ವೇಗವಾಗಿ ಬೆಳೆಯುತ್ತಿರುವ ಫ್ಯಾಸಿಸಂನ ವಿರುದ್ಧವೂ ಧ್ವನಿ ಎತ್ತುತ್ತಿದ್ದರು. ʼಗಾಂಧೀ ಮತ್ತು ಅಂಬೇಡ್ಕರ್ ಅವರುಗಳಲ್ಲಿ ಭಿನ್ನಾಭಿಪ್ರಾಯ ಇತ್ತೇ ಹೊರತು ವೈರತ್ವ ಇರಲಿಲ್ಲʼ ಎಂಬ ಅವರ ಮಾತು ನನಗೆ ವೈಯಕ್ತಿಕವಾಗಿ ಬಹಳ ಖುಷಿ ನೀಡಿತ್ತು. ಒಳ್ಳೆಯವರನ್ನೆಲ್ಲಾ ಟ್ರೋಲ್‌ ಮಾಡುವುದನ್ನೇ ಕೆಲಸ ಮಾಡಿಕೊಂಡಿರುವವರ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿತ್ತು. ‘ನಿಮ್ಮ ಬಗ್ಗೆ ಹೀಗೆ ಬರೆದಿದ್ದಾರಲ್ಲಾ?ʼ ಎಂದರೆ ಅಜ್ಜ ನಕ್ಕುಬಿಡುತ್ತಿದ್ದರು! ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು!ನಮನಗಳು ಸಾರ್‌” ಎಂದು ಪುರುಷೋತ್ತಮ ಬಿಳಿಮಲೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಸಂಘಟನೆ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ಅವರು, “ಸರಳ,ಸ್ವಾಭಿಮಾನಿ ಮತ್ತು ಹೋರಾಟವನ್ನೇ ಉಸಿರಾಗಿಸಿಕೊಂಡ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರು” ಎಂದು ಹೇಳಿದ್ದಾರೆ.

ಲೇಖಕಿ ಚೇತನಾ ತೀರ್ಥಹಳ್ಳಿ ಅವರು, “ನಮ್ಮ ಪ್ರೀತಿಯ ‘ಆಂದೋಲನಜೀವಿ’, ಅದಮ್ಯ ಚೇತನ ದೊರೆಸ್ವಾಮಿಯವರು ತಮ್ಮ ಶತಮಾನದ ಬದುಕು ಮುಗಿಸಿದ್ದಾರೆ. ಸದಾ ಶಾಂತಿಯನ್ನೇ ಹಂಚಿದ ದೊರೆಸ್ವಾಮಿಯವರ ಆತ್ಮಕ್ಕೆ ಶಾಂತಿ ದೊರೆಯದೆ ಇರುವುದೆ? ಅದರಲ್ಲೂ ಇವತ್ತು ಬುದ್ಧ ಹುಣ್ಣಿಮೆ!” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು, “ಬೆಳಕು ಆರಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...