Homeಮುಖಪುಟಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದಾಗಿ ದೆಹಲಿಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆ ಉಂಟಾಗಿದ್ದು, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ನೀವು ಹೇಳುತ್ತೀರಾ? ಕೈಗಾರಿಕೆಗಳು ಕಾಯಬಹುದೇ ಹೊರತು ರೋಗಿಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ನಿನ್ನೆ ಒಂದೇ ದಿನ 30 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿದ್ದು, ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.

ಔಷಧಿ, ಆಕ್ಸಿಜನ್ ನಿಜವಾಗಿಯೂ ಅಗತ್ಯವಿರುವ ಕಡೆಗೆ ನೀಡದಿದ್ದಲ್ಲಿ ಅವರ ಕೈಗೆ ರಕ್ತ ಮೆತ್ತುಕೊಂಡಿದೆ ಎಂದರ್ಥ ಎಂದು ಕಟುವಾಗಿ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ಕುಟುಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ಕೇಂದ್ರ ಸರ್ಕಾರವು ಕಬ್ಬಿಣ ಮತ್ತು ಪೆಟ್ರೋಲಿಯಂ ಕಂಪನಿಗಳಿಗೆ ಒದಗಿಸುವ ಆಕ್ಸಿಜನ್‌ ಅನ್ನು ಮೊಟಕುಗೊಳಿಸಬೇಕು. ಅದನ್ನು ಕೂಡಲೇ ಅಗತ್ಯವಿರುವ ಆಸ್ಪತ್ರೆಗಳಿಗೆ ತಿರುಗಿಸಬೇಕು. ನಾವು ಸರ್ವನಾಶದ ಸಂದರ್ಭದಲ್ಲಿದ್ದೀವಿ. ಈ ಸಮಯದಲ್ಲಿ ಆರ್ಥಿಕ ಲಾಭಕ್ಕಿಂತ ಮಾನವ ಜೀವಗಳಿಗೆ ಬೆಲೆ ಕೊಡಬೇಕು. ಕಾರ್ಖಾನೆಗಳು ಬೇಕಾದರೆ ಕಾಯುತ್ತವೆ ಆದರೆ ರೋಗಗಳು ಕಾಯಲಾಗುವುದಿಲ್ಲ ಎಂದು ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿಅವರಿದ್ದ ಪೀಠ ಹೇಳಿದೆ.

ದೆಹಲಿಯ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಆಕ್ಸಿಜನ್ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳಿಗೆ ಆಕ್ಸಿಜನ್ ಬಳಕೆಯನ್ನು ಕಡಿಮೆ ಮಾಡಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ ನ್ಯಾಯಾಲಯ “ಏಪ್ರಿಲ್ 22 ರಿಂದ ಕಾರ್ಖಾನೆಗಳಿಗೆ ಆಕ್ಸಿಜನ್ ಸರಬರಾಜು ನಿಲ್ಲಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಈಗಲೇ ಏಕೆ ನಿಲ್ಲಿಸಲು ಆಗುವುದಿಲ್ಲ? ಅಲ್ಲಿಯವರೆಗೂ ಏಕೆ ಕಾಯಬೇಕು? ಜೀವಗಳು ಅಪಾಯದಲ್ಲಿವೆ. ಆಮ್ಲಜನಕಕ್ಕಾಗಿ ಏಪ್ರಿಲ್ 22 ರವರೆಗೆ ಕಾಯುವಂತೆ ನೀವು ರೋಗಿಗಳಿಗೆ ಹೇಳುತ್ತೀರಾ?” ಎಂದು ಕಿಡಿಕಾರಿದೆ.


ಇದನ್ನೂ ಓದಿ: ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...