Homeರಾಜಕೀಯಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

- Advertisement -
- Advertisement -

ಕೇರಳದ ಲೋಕತಾಂತ್ರಿಕ ಜನತಾ ದಳ (ಎಲ್‌ಜೆಡಿ) ತನ್ನ ಮಾತೃ ಪಕ್ಷವಾದ ಜನತಾ ದಳ-ಜಾತ್ಯತೀತ (ಜೆಡಿಎಸ್‌‌) ನೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆ. ಈ ಬಗ್ಗೆ ಗುರುವಾರದಂದು ಜೆಡಿಎಸ್‌ ಕೇರಳ ರಾಜ್ಯ ಸಮಿತಿಯು ಅನುಮೋದಿಸಿದೆ ಎಂದು ವರದಿಯಾಗಿದೆ. ವಿಲೀನಗೊಂಡ ನಂತರ ಪಕ್ಷವು ಎಚ್‌.ಡಿ. ದೇವೇಗೌಡ ಅವರ ನೇತೃತ್ವದ ಜೆಡಿಎಸ್ ರಾಷ್ಟ್ರೀಯ ಸಮಿತಿಯ ಭಾಗವಾಗಿ ಕಾರ್ಯನಿರ್ವಹಿಸಲಿದೆ.

ಕೇರಳದಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌‌ ಪಕ್ಷಗಳು ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮೈತ್ರಿ ಕೂಟದ ಸಣ್ಣ ಮಿತ್ರಪಕ್ಷಗಳಾಗಿವೆ. ಎರಡು ರಾಜಕೀಯ ಪಕ್ಷಗಳ ವಿಲೀನವು ರಾಜ್ಯದ ರಾಜಕೀಯ ಲೆಕ್ಕಾಚಾರಗಳ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ 2021 ರ ಚುನಾವಣೆಯ ವೇಳೆ ಜೆಡಿಎಸ್‌ನಿಂದ ಇಬ್ಬರು ಶಾಸಕರು ಆಯ್ಕೆಯಾಗಿದ್ದರು. ಕೊಟ್ಟಾಯಂನ ತಿರುವಲ್ಲಾವನ್ನು ಪ್ರತಿನಿಧಿಸುವ ಮ್ಯಾಥ್ಯೂ ಟಿ. ಥಾಮಸ್ ಮತ್ತು ಪಾಲಕ್ಕಾಡ್‌ನ ಚಿತ್ತೂರು ಪ್ರತಿನಿಧಿಸುವ ಕೆ ಕೃಷ್ಣನ್‌ಕುಟ್ಟಿ ಜೆಡಿಎಸ್‌ನ ಶಾಸಕರಾಗಿದ್ದು, ಕಣ್ಣೂರಿನ ಕೂತುಪರಂಬದಿಂದ ಗೆದ್ದಿರುವ ಕೆ.ಪಿ. ಮೋಹನನ್ ಎಲ್‌ಜೆಡಿಯ ಏಕೈಕ ಶಾಸಕರಾಗಿದ್ದಾರೆ. ಎರಡು ಪಕ್ಷಗಳ ವಿಲೀನದೊಂದಿಗೆ ಜೆಡಿಎಸ್‌ ಶಾಸಕರ ಸಂಖ್ಯೆಯು ಕೇರಳದಲ್ಲಿ ಮೂರಕ್ಕೆ ಏರಲಿದೆ.

140 ಸದಸ್ಯರಿರುವ ಕೇರಳ ಅಸೆಂಬ್ಲಿಯಲ್ಲಿ ಎಲ್‌ಡಿಎಫ್‌ ಮೈತ್ರಿಕೂಟದಲ್ಲಿ ಒಟ್ಟು 99 ಸದಸ್ಯರಿದ್ದು, ಒಕ್ಕೂಟದ ನೇತೃತ್ವ ವಹಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) 62 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಎಲ್‌ಜೆಡಿ ಮುಖ್ಯಸ್ಥ ಎಂ.ಪಿ. ವೀರೇಂದ್ರ ಕುಮಾರ್ ಜೀವಂತವಾಗಿದ್ದಾಗ 2019 ರಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌ ನಡುವಿನ ವಿಲೀನದ ಕುರಿತು ಚರ್ಚೆಗಳು ಅನಧಿಕೃತವಾಗಿ ಪ್ರಾರಂಭವಾಗಿದ್ದವು. ಎರಡೂ ಪಕ್ಷಗಳು ನಾಯಕತ್ವದ ಹುದ್ದೆಗಳನ್ನು ಹಂಚಿಕೊಳ್ಳಲಿವೆ ಎಂದು ವರದಿಯಾಗಿದೆ. ಮಾಜಿ ಸಚಿವ ಮತ್ತು ಹಾಲಿ ಶಾಸಕ ಮ್ಯಾಥ್ಯೂ ಟಿ. ಥಾಮಸ್ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಯಿದ್ದು, ವೀರೇಂದ್ರ ಕುಮಾರ್ ಅವರ ಪುತ್ರ ಎಂ.ವಿ. ಶ್ರೇಯಮ್ಸ್ ಕುಮಾರ್ ರಾಷ್ಟ್ರೀಯ ಕಾರ್ಯದರ್ಶಿಯಾಗುವ ನಿರೀಕ್ಷೆಯಿದೆ.

ವಯನಾಡಿನ ಕಲ್ಪೆಟ್ಟಾದಿಂದ ಎರಡು ಬಾರಿ ಶಾಸಕರಾಗಿದ್ದ, ರಾಜ್ಯಸಭೆಯ ಮಾಜಿ ಸಂಸದರಾದ ಶ್ರೇಯಮ್ಸ್ ಕುಮಾರ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಮಾತೃಭೂಮಿ ಮಾಧ್ಯಮ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಚುಕ್ಕಾಣಿ ಹಿಡಿದಿದ್ದಾರೆ. ಶ್ರೇಯಮ್ಸ್ 2021 ರಲ್ಲಿ ಕಲ್ಪೆಟ್ಟಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಚುನಾವಣೆಯಲ್ಲಿ ಎಲ್‌ಜೆಡಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆದ್ದಿತ್ತು.

ಇದನ್ನೂ ಓದಿ: ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...