Homeರಾಜಕೀಯಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

- Advertisement -
- Advertisement -

ಕೇರಳದ ಲೋಕತಾಂತ್ರಿಕ ಜನತಾ ದಳ (ಎಲ್‌ಜೆಡಿ) ತನ್ನ ಮಾತೃ ಪಕ್ಷವಾದ ಜನತಾ ದಳ-ಜಾತ್ಯತೀತ (ಜೆಡಿಎಸ್‌‌) ನೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆ. ಈ ಬಗ್ಗೆ ಗುರುವಾರದಂದು ಜೆಡಿಎಸ್‌ ಕೇರಳ ರಾಜ್ಯ ಸಮಿತಿಯು ಅನುಮೋದಿಸಿದೆ ಎಂದು ವರದಿಯಾಗಿದೆ. ವಿಲೀನಗೊಂಡ ನಂತರ ಪಕ್ಷವು ಎಚ್‌.ಡಿ. ದೇವೇಗೌಡ ಅವರ ನೇತೃತ್ವದ ಜೆಡಿಎಸ್ ರಾಷ್ಟ್ರೀಯ ಸಮಿತಿಯ ಭಾಗವಾಗಿ ಕಾರ್ಯನಿರ್ವಹಿಸಲಿದೆ.

ಕೇರಳದಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌‌ ಪಕ್ಷಗಳು ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮೈತ್ರಿ ಕೂಟದ ಸಣ್ಣ ಮಿತ್ರಪಕ್ಷಗಳಾಗಿವೆ. ಎರಡು ರಾಜಕೀಯ ಪಕ್ಷಗಳ ವಿಲೀನವು ರಾಜ್ಯದ ರಾಜಕೀಯ ಲೆಕ್ಕಾಚಾರಗಳ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ 2021 ರ ಚುನಾವಣೆಯ ವೇಳೆ ಜೆಡಿಎಸ್‌ನಿಂದ ಇಬ್ಬರು ಶಾಸಕರು ಆಯ್ಕೆಯಾಗಿದ್ದರು. ಕೊಟ್ಟಾಯಂನ ತಿರುವಲ್ಲಾವನ್ನು ಪ್ರತಿನಿಧಿಸುವ ಮ್ಯಾಥ್ಯೂ ಟಿ. ಥಾಮಸ್ ಮತ್ತು ಪಾಲಕ್ಕಾಡ್‌ನ ಚಿತ್ತೂರು ಪ್ರತಿನಿಧಿಸುವ ಕೆ ಕೃಷ್ಣನ್‌ಕುಟ್ಟಿ ಜೆಡಿಎಸ್‌ನ ಶಾಸಕರಾಗಿದ್ದು, ಕಣ್ಣೂರಿನ ಕೂತುಪರಂಬದಿಂದ ಗೆದ್ದಿರುವ ಕೆ.ಪಿ. ಮೋಹನನ್ ಎಲ್‌ಜೆಡಿಯ ಏಕೈಕ ಶಾಸಕರಾಗಿದ್ದಾರೆ. ಎರಡು ಪಕ್ಷಗಳ ವಿಲೀನದೊಂದಿಗೆ ಜೆಡಿಎಸ್‌ ಶಾಸಕರ ಸಂಖ್ಯೆಯು ಕೇರಳದಲ್ಲಿ ಮೂರಕ್ಕೆ ಏರಲಿದೆ.

140 ಸದಸ್ಯರಿರುವ ಕೇರಳ ಅಸೆಂಬ್ಲಿಯಲ್ಲಿ ಎಲ್‌ಡಿಎಫ್‌ ಮೈತ್ರಿಕೂಟದಲ್ಲಿ ಒಟ್ಟು 99 ಸದಸ್ಯರಿದ್ದು, ಒಕ್ಕೂಟದ ನೇತೃತ್ವ ವಹಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) 62 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಎಲ್‌ಜೆಡಿ ಮುಖ್ಯಸ್ಥ ಎಂ.ಪಿ. ವೀರೇಂದ್ರ ಕುಮಾರ್ ಜೀವಂತವಾಗಿದ್ದಾಗ 2019 ರಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌ ನಡುವಿನ ವಿಲೀನದ ಕುರಿತು ಚರ್ಚೆಗಳು ಅನಧಿಕೃತವಾಗಿ ಪ್ರಾರಂಭವಾಗಿದ್ದವು. ಎರಡೂ ಪಕ್ಷಗಳು ನಾಯಕತ್ವದ ಹುದ್ದೆಗಳನ್ನು ಹಂಚಿಕೊಳ್ಳಲಿವೆ ಎಂದು ವರದಿಯಾಗಿದೆ. ಮಾಜಿ ಸಚಿವ ಮತ್ತು ಹಾಲಿ ಶಾಸಕ ಮ್ಯಾಥ್ಯೂ ಟಿ. ಥಾಮಸ್ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಯಿದ್ದು, ವೀರೇಂದ್ರ ಕುಮಾರ್ ಅವರ ಪುತ್ರ ಎಂ.ವಿ. ಶ್ರೇಯಮ್ಸ್ ಕುಮಾರ್ ರಾಷ್ಟ್ರೀಯ ಕಾರ್ಯದರ್ಶಿಯಾಗುವ ನಿರೀಕ್ಷೆಯಿದೆ.

ವಯನಾಡಿನ ಕಲ್ಪೆಟ್ಟಾದಿಂದ ಎರಡು ಬಾರಿ ಶಾಸಕರಾಗಿದ್ದ, ರಾಜ್ಯಸಭೆಯ ಮಾಜಿ ಸಂಸದರಾದ ಶ್ರೇಯಮ್ಸ್ ಕುಮಾರ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಮಾತೃಭೂಮಿ ಮಾಧ್ಯಮ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಚುಕ್ಕಾಣಿ ಹಿಡಿದಿದ್ದಾರೆ. ಶ್ರೇಯಮ್ಸ್ 2021 ರಲ್ಲಿ ಕಲ್ಪೆಟ್ಟಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಚುನಾವಣೆಯಲ್ಲಿ ಎಲ್‌ಜೆಡಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆದ್ದಿತ್ತು.

ಇದನ್ನೂ ಓದಿ: ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...