Homeರಾಜಕೀಯಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

- Advertisement -
- Advertisement -

ಕೇರಳದ ಲೋಕತಾಂತ್ರಿಕ ಜನತಾ ದಳ (ಎಲ್‌ಜೆಡಿ) ತನ್ನ ಮಾತೃ ಪಕ್ಷವಾದ ಜನತಾ ದಳ-ಜಾತ್ಯತೀತ (ಜೆಡಿಎಸ್‌‌) ನೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆ. ಈ ಬಗ್ಗೆ ಗುರುವಾರದಂದು ಜೆಡಿಎಸ್‌ ಕೇರಳ ರಾಜ್ಯ ಸಮಿತಿಯು ಅನುಮೋದಿಸಿದೆ ಎಂದು ವರದಿಯಾಗಿದೆ. ವಿಲೀನಗೊಂಡ ನಂತರ ಪಕ್ಷವು ಎಚ್‌.ಡಿ. ದೇವೇಗೌಡ ಅವರ ನೇತೃತ್ವದ ಜೆಡಿಎಸ್ ರಾಷ್ಟ್ರೀಯ ಸಮಿತಿಯ ಭಾಗವಾಗಿ ಕಾರ್ಯನಿರ್ವಹಿಸಲಿದೆ.

ಕೇರಳದಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌‌ ಪಕ್ಷಗಳು ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮೈತ್ರಿ ಕೂಟದ ಸಣ್ಣ ಮಿತ್ರಪಕ್ಷಗಳಾಗಿವೆ. ಎರಡು ರಾಜಕೀಯ ಪಕ್ಷಗಳ ವಿಲೀನವು ರಾಜ್ಯದ ರಾಜಕೀಯ ಲೆಕ್ಕಾಚಾರಗಳ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ 2021 ರ ಚುನಾವಣೆಯ ವೇಳೆ ಜೆಡಿಎಸ್‌ನಿಂದ ಇಬ್ಬರು ಶಾಸಕರು ಆಯ್ಕೆಯಾಗಿದ್ದರು. ಕೊಟ್ಟಾಯಂನ ತಿರುವಲ್ಲಾವನ್ನು ಪ್ರತಿನಿಧಿಸುವ ಮ್ಯಾಥ್ಯೂ ಟಿ. ಥಾಮಸ್ ಮತ್ತು ಪಾಲಕ್ಕಾಡ್‌ನ ಚಿತ್ತೂರು ಪ್ರತಿನಿಧಿಸುವ ಕೆ ಕೃಷ್ಣನ್‌ಕುಟ್ಟಿ ಜೆಡಿಎಸ್‌ನ ಶಾಸಕರಾಗಿದ್ದು, ಕಣ್ಣೂರಿನ ಕೂತುಪರಂಬದಿಂದ ಗೆದ್ದಿರುವ ಕೆ.ಪಿ. ಮೋಹನನ್ ಎಲ್‌ಜೆಡಿಯ ಏಕೈಕ ಶಾಸಕರಾಗಿದ್ದಾರೆ. ಎರಡು ಪಕ್ಷಗಳ ವಿಲೀನದೊಂದಿಗೆ ಜೆಡಿಎಸ್‌ ಶಾಸಕರ ಸಂಖ್ಯೆಯು ಕೇರಳದಲ್ಲಿ ಮೂರಕ್ಕೆ ಏರಲಿದೆ.

140 ಸದಸ್ಯರಿರುವ ಕೇರಳ ಅಸೆಂಬ್ಲಿಯಲ್ಲಿ ಎಲ್‌ಡಿಎಫ್‌ ಮೈತ್ರಿಕೂಟದಲ್ಲಿ ಒಟ್ಟು 99 ಸದಸ್ಯರಿದ್ದು, ಒಕ್ಕೂಟದ ನೇತೃತ್ವ ವಹಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) 62 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಎಲ್‌ಜೆಡಿ ಮುಖ್ಯಸ್ಥ ಎಂ.ಪಿ. ವೀರೇಂದ್ರ ಕುಮಾರ್ ಜೀವಂತವಾಗಿದ್ದಾಗ 2019 ರಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌ ನಡುವಿನ ವಿಲೀನದ ಕುರಿತು ಚರ್ಚೆಗಳು ಅನಧಿಕೃತವಾಗಿ ಪ್ರಾರಂಭವಾಗಿದ್ದವು. ಎರಡೂ ಪಕ್ಷಗಳು ನಾಯಕತ್ವದ ಹುದ್ದೆಗಳನ್ನು ಹಂಚಿಕೊಳ್ಳಲಿವೆ ಎಂದು ವರದಿಯಾಗಿದೆ. ಮಾಜಿ ಸಚಿವ ಮತ್ತು ಹಾಲಿ ಶಾಸಕ ಮ್ಯಾಥ್ಯೂ ಟಿ. ಥಾಮಸ್ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಯಿದ್ದು, ವೀರೇಂದ್ರ ಕುಮಾರ್ ಅವರ ಪುತ್ರ ಎಂ.ವಿ. ಶ್ರೇಯಮ್ಸ್ ಕುಮಾರ್ ರಾಷ್ಟ್ರೀಯ ಕಾರ್ಯದರ್ಶಿಯಾಗುವ ನಿರೀಕ್ಷೆಯಿದೆ.

ವಯನಾಡಿನ ಕಲ್ಪೆಟ್ಟಾದಿಂದ ಎರಡು ಬಾರಿ ಶಾಸಕರಾಗಿದ್ದ, ರಾಜ್ಯಸಭೆಯ ಮಾಜಿ ಸಂಸದರಾದ ಶ್ರೇಯಮ್ಸ್ ಕುಮಾರ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಮಾತೃಭೂಮಿ ಮಾಧ್ಯಮ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಚುಕ್ಕಾಣಿ ಹಿಡಿದಿದ್ದಾರೆ. ಶ್ರೇಯಮ್ಸ್ 2021 ರಲ್ಲಿ ಕಲ್ಪೆಟ್ಟಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಚುನಾವಣೆಯಲ್ಲಿ ಎಲ್‌ಜೆಡಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆದ್ದಿತ್ತು.

ಇದನ್ನೂ ಓದಿ: ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...