Homeಮುಖಪುಟಜಾರ್ಖಂಡ್‌ನಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲವೆಂದ ಎಲ್‌ಜೆಪಿ: ಸ್ವತಂತ್ರವಾಗಿ ೫೦ ಕ್ಷೇತ್ರಗಳಲ್ಲಿ ಸ್ಪರ್ಧೆ

ಜಾರ್ಖಂಡ್‌ನಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲವೆಂದ ಎಲ್‌ಜೆಪಿ: ಸ್ವತಂತ್ರವಾಗಿ ೫೦ ಕ್ಷೇತ್ರಗಳಲ್ಲಿ ಸ್ಪರ್ಧೆ

- Advertisement -
- Advertisement -

ಜಾರ್ಖಂಡ್‌ನಲ್ಲಿ ನವೆಂಬರ್‌ ೩೦ರಿಂದ ಡಿಸೆಂಬರ್‌ ೨೦ರವರೆಗೆ ಐದು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಒಟ್ಟು ೮೨ ವಿಧಾನಸಭೆ ಕ್ಷೇತ್ರಗಳಿದ್ದು, ಈಗಾಗಲೇ ಮೈತ್ರಿ, ಸ್ಥಾನ ಹಂಚಿಕೆ ಕಸರತ್ತು ನಡೆದಿದೆ. ಈ ಹಿಂದೆ ಎಲ್‌ಜೆಪಿ ಮತ್ತು ಬಿಜೆಪಿ ಮೈತ್ರಿ ಮೂಲಕ ಚುನಾವಣೆ ಎದುರಿಸಿತ್ತು. ಆದರೆ ಈ ಬಾರಿ ಬಿಜೆಪಿ ಸಖ್ಯ ತೊರೆದಿರುವ ಎಲ್‌ಜೆಪಿ (ಲೋಕ ಜನಶಕ್ತಿ ಪಕ್ಷ ) ಸ್ವತಂತ್ರವಾಗಿ ಚುನಾವಣೆ ಎದುರಿಸುವುದಾಗಿ ಹೇಳಿದೆ.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಪ್ರಭಾವ ಜಾಖಂಡ್‌ನಲ್ಲಿ ಬೀರಿದೆ. ಈ ಹಿಂದೆ ಮೈತ್ರಿ ಮೂಲಕ ಚುನಾವಣೆ ಎದುರಿಸಲು ಸಜ್ಜಾಗಿದ್ದ ಎಲ್‌ಜೆಪಿ ಇದ್ದಕ್ಕಿದ್ದಂತೆ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದೆ. ಮೈತ್ರಿ ಮಾಡಿಕೊಂಡರೆ ಯಾವ ಪರಿಣಾಮ ಎದುರಿಸಬೇಕಾಗಬಹುದು ಎಂಬುದನ್ನು ಮೊದಲೇ ಊಹಿಸಿರುವ ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಶಿಫಾರಸು: ಮುಂದೇನು..?

ಇನ್ನು ಚಿರಾಗ್‌ ಪಾಸ್ವಾನ್‌ ತಂದೆ ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನಾ ಅವರ ಪುತ್ರ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಿರಾಗ್‌, ಇದು ವಿಧಾನಸಭೆ ಚುನಾವಣೆ. ಇಲ್ಲಿ ಮೈತ್ರಿ ಮಾಡಿಕೊಳ್ಳಬೇಕೋ, ಬೇಡವೋ ಎಂಬುದನ್ನು ರಾಜ್ಯ ನಾಯಕರು ನಿರ್ಧರಿಸುತ್ತಾರೆ. ಬಿಜೆಪಿ ದೊಡ್ಡಣ್ಣನ ನೀತಿಯನ್ನು ಸಹಿಸಲು ಸಾಧ್ಯವಿಲ್ಲ. ೫೦ ಕ್ಷೇತ್ರಗಳಲ್ಲಿ ಎಲ್‌ಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಸಂಜೆಯೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇತ್ತ ಬಿಹಾರ್‌ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಕೂಡ ಜಾರ್ಖಂಡ್‌ನಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿದೆ. ಈಗಾಗಲೇ ಬಿಜೆಪಿ ೫೨ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೀಡಿರುವ ಹೊಡೆತ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ. ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಇತರೆ ಪಕ್ಷಗಳ ಮೇಲೂ ಬೀರಿದ್ದು, ನಿಮ್ಮ ಸಹವಾಸವೇ ಬೇಡ ಎನ್ನುವ ನಿರ್ಧಾರಕ್ಕೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...