Homeಕರ್ನಾಟಕಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (LKG, UGK) ಶಾಲೆ : ಈ ಕಾಲದ ಅಗತ್ಯ

ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (LKG, UGK) ಶಾಲೆ : ಈ ಕಾಲದ ಅಗತ್ಯ

ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪಡೆದ ನಂತರ ಮುಂದಿನ ಹಂತವಾದ  1-5 ನೇ ತರಗತಿಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಅದೇ ಶಾಲೆಗಳಲ್ಲಿ ಮುಂದುವರೆಸುತ್ತಾರೆ.

- Advertisement -
- Advertisement -

| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ

ರಾಜ್ಯ ಸರಕಾರವು ಈ ವರ್ಶದಿಂದ ಪೂರ್ವ ಪ್ರಾಥಮಿಕ ಶಾಲೆಗಳನ್ನ (ಎಲ್ ಕೆಜಿ/ಯು ಕೆಜಿ) ಪ್ರಾರಂಬಿಸುವುದಾಗಿ ಹೇಳಿದೆ. ಇದು ಸ್ವಾಗತಾರ್ಹ ನಿರ್ದಾರ. ಕಳೆದ ಐದು ವರ್ಶಗಳಿಂದ ಈ ಕುರಿತು ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ (ಸಶಿಜ) ಸಂಘಟನೆ ಒಂದು ಚಳುವಳಿಯನ್ನೆ ನಡೆಸಿತ್ತು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾದಹಳ್ಳಿ, ಕೆ.ಆರ್.ಪೇಟೆಯ ಶತಮಾನೋತ್ಸವ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಒಕ್ಕೂಟ, ಸಶಿಜ, ಸ್ಥಳೀಯ ಅದಿಕಾರಿಗಳು, ಪ್ರಾದ್ಯಾಪಕರು  ಒಂದಾಗಿ ‘ಮಕ್ಕಳ ಮನೆ’ ಹೆಸರಿನಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನ ಪ್ರಾರಂಬಿಸಿದರು. ನಾಲ್ಕು ವರ್ಶಗಳ ನಂತರವೂ ಇಂದಿಗೂ ಆ ಶಾಲೆಗಳು ಯಶಸ್ವಿಯಾಗಿ ನಡೆಯುತ್ತಿವೆ ಮತ್ತು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯೂ ಹೆಚ್ಚಾಗಿದೆ. ಮತ್ತು ಇದು ನಿರಂತರವಾಗಿ ಮುಂದುವರೆಯುತ್ತದೆ

ಈ ನಿಟ್ಟಿನಲ್ಲಿ ಇನ್ನೂ ಆಗಬೇಕಾದದ್ದು ಬಹಳಷ್ಟಿದೆ. ಶಾಲೆಗಳ ಬಲವರ್ಧನೆಗಾಗಿ ಸ್ಥಳೀಯ ಸಮುದಾಯಗಳು ಮಕ್ಕಳ ಮನೆಗಳನ್ನು ಆರಂಭಿಸಿದರೂ ಅದರ ನಿರ್ವಹಣೆಯನ್ನು ಮಾಡುವ ಜವಾಬ್ದಾರಿ ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಸಶಿಜ ಸಂಘಟನೆ ಒತ್ತಾಯಿಸುತ್ತಲೆ ಇತ್ತು. ಇದೆ ಸಂದರ್ಬದಲ್ಲಿ ಎಸ್.ಜಿ.ಸಿದ್ದರಾಮಯ್ಯನವರು ಅದ್ಯಕ್ಷರಾಗಿರುವ ‘ಕನ್ನಡ ಅಬಿವೃದ್ದಿ ಪ್ರಾದಿಕಾರ’ವು ಸರಕಾರಿ ಶಾಲೆಗಳ ಸಬಲೀಕರಣ ಸಮಿತಿಯು ನೀಡಿದ ವರದಿಯಲ್ಲಿಯೂ ಈ ಪೂರ್ವಪ್ರಾಥಮಿಕ ಶಾಲೆಗಳನ್ನ ಪ್ರಾರಂಬಿಸಬೇಕು ಎಂದು ಶಿಫಾರಸ್ಸು ಮಾಡಿತ್ತು ಮತ್ತು ಅದರ ಅಗತ್ಯತೆಯ ಕುರಿತು ವಿವರಿಸಲಾಗಿತ್ತು. ಈಗ ಸರಕಾರವು ಪೂರ್ವ ಪ್ರಾಥಮಿಕ ಶಾಲೆಗಳನ್ನ ಪ್ರಾರಂಬಿಸಲು ಮುಂದಾಗಿರುವುದು ಸ್ವಾಗತಾರ್ಹ

ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಪೂರ್ವ ಪ್ರಾಥಮಿಕ ಶಾಲೆಗಳ ಅಗತ್ಯವನ್ನು ಈ ರೀತಿ ಪಟ್ಟಿ ಮಾಡಬಹುದು:

  • ಮೊದಲನೆಯದಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವಾದ (ಎಲ್.ಕೆ.ಜಿ/ಯುಕೆಜಿ) ‘ಮಕ್ಕಳ ಮನೆ’ಯನ್ನು ಪ್ರಾರಂಭ ಮಾಡಿದರೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ದಾಖಲಾತಿ ಪ್ರಮಾಣ ಹೆಚ್ಚುತ್ತದೆ.
  • ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪಡೆದ ನಂತರ ಮುಂದಿನ ಹಂತವಾದ  1-5 ನೇ ತರಗತಿಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಅದೇ ಶಾಲೆಗಳಲ್ಲಿ ಮುಂದುವರೆಸುತ್ತಾರೆ.
  • ಮಕ್ಕಳ ಮನೆಯ ಕಾರಣಕ್ಕಾಗಿ ಆರಂಭದಿಂದಲೇ ಪೋಷಕರು ನೇರವಾಗಿ ಮಕ್ಕಳ ಶಿಕ್ಷಣದ ಎಲ್ಲಾ ಚಟುವಟಿಕೆಗಳÀಲ್ಲಿ ಪಾಲ್ಗೊಳ್ಳಬಹುದು. ಮಕ್ಕಳ ಪ್ರಾಥಮಿಕ ಪೂರ್ವ ಶಿಕ್ಷಣದ ಪ್ರತಿ ಹಂತದಲ್ಲೂ ಪೋಷಕರು ಒಳಗೊಳ್ಳುತ್ತಾ, ಶಿಕ್ಷಕರೊಂದಿಗೆ ಸಮಾಲೋಚಿಸಿ ಉತ್ತಮ ‘ಗುಣಮಟ್ಟದಕಲಿಕೆಯನ್ನು’ ತಮ್ಮ ಮಕ್ಕಳಲ್ಲಿ ರೂಪಿಸುವುದಕ್ಕೆ ಇದು ಅವಕಾಶ ಕಲ್ಪಿಸುತ್ತದೆ.
  • ಈ ಹಂತದಲ್ಲಿ ಕಲಿಕೆಯು ಮಕ್ಕಳ ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಪೂರಕವಾಗುತ್ತದೆ. ಅವರ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ
  • ಪ್ರಾಥಮಿಕ ಪೂರ್ವ ಹಂತದಿಂದಲೇ ಪೋಷಕರು ಸರ್ಕಾರಿ ಶಾಲೆಗಳೊಂದಿಗೆ ಒಡನಾಟ ಆರಂಭಿಸುವುದರಿಂದ ಅವರಿಗೆ ಅಲ್ಲಿ ಮೂಲಭೂತ ಸೌಕರ್ಯದ ಕೊರತೆಗಳು ಸ್ಪಷ್ಟವಾಗಿ ಗೋಚರಿಸುತ್ತವೆ ಮತ್ತು ಪೋಷಕರಿಗೆ ಅಲ್ಲಿನ ಆಡಳಿತ ಮಂಡಳಿಯೊಂದಿಗೆ ನೇರವಾಗಿ ಈ ಕುರಿತು ಚರ್ಚಿಸಲು ಮತ್ತು ಆ ಕೊರತೆಯನ್ನು ನಿವಾರಿಸಲು ಅವಕಾಶ ದೊರಕುತ್ತದೆ. ಇದು ಪೋಷಕರಲ್ಲಿ ಮತ್ತು ಶಿಕ್ಷಕರಲ್ಲಿ ಸಾಮಾಜಿಕ ಜವಬ್ದಾರಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಸಾಮರಸ್ಯವನ್ನು ಉಂಟುಮಾಡುತ್ತದೆ.
  • ಪೋಷಕರು, ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ (ಎಸ್‍ಡಿಎಂಸಿ)ಗಳ ನಡುವೆ ಸೌಹಾರ್ದಯುತ ಸಂಬಂಧಗಳನ್ನು ಗಟ್ಟಿಗೊಳಿಸಿಕೊಳ್ಳಲು ಮಕ್ಕಳ ಮನೆ ತುಂಬಾ ಸಹಕಾರಿಯಾಗುತ್ತದೆ.
  • ಇದರ ಕಾರಣಕ್ಕಾಗಿ “ಗ್ರಾಮ-ಪೋಷಕರು–ಶಿಕ್ಷಕ-ಎಸ್‍ಡಿಎಂಸಿ” ಗಳ ನಡುವೆ ಒಂದು ಕಾರ್ಯಕಾರಿ ಅನುಬಂಧ ಏರ್ಪಡುತ್ತದೆ. ಶಾಲೆ ಸಮುದಾಯ ಕೇಂದ್ರಿತವಾಗುತ್ತದೆ
  • ಆರಂಬದ ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಸರ್ಕಾರಿ ಶಾಲೆಗಳಲ್ಲಿ ಸಮಾನ ಶಿಕ್ಷಣಕ್ಕಾಗಿ ಉತ್ತಮವಾದ ಭದ್ರ ಅಡಿಪಾಯ ಹಾಕಿದರೆ ಇದು ಮುಂದಿನ ಹಂತವಾದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣಕ್ಕೆ ಅತ್ಯುತ್ತಮವಾದ ಕಲಿಕೆಯ ವಾತಾವರಣವನ್ನು ಕಲ್ಪಿಸುತ್ತದೆ     

ಇಲ್ಲಿ ಅಂಗನವಾಡಿಗಳನ್ನ ಸರಕಾರಿ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸುವುದರ ಹಿಂದೆ ಒಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಸಬಲೀಕರಣದ ಆಶಯವಿದೆ. ಅಂಗನವಾಡಿ (ಶಿಶುಪಾಲನೆ) -ಪೂರ್ವ ಪ್ರಾಥಮಿಕ-ಪ್ರಾಥಮಿಕ ಶಿಕ್ಷಣವನ್ನ ಒಂದು ಹಾರದಂತೆ ಒಂದೆ ದಾರದಲ್ಲಿ ಹೆಣೆಯುವುದರಿಂದ ಪ್ರತಿಯೊಂದು ವಲಯವು ಮತ್ತೊಂದಕ್ಕೆ ಪೂರಕವಾಗಿ (feeder) ಕರ್ತವ್ಯ ನಿರ್ವಹಿಸುತ್ತದೆ ಮತ್ತು ಪರಸ್ಪರ ಪೋಶಿಸಿಕೊಳ್ಳುತ್ತವೆ ಮತ್ತು ಒಂದು ಮತ್ತೊಂದನ್ನ ಗಟ್ಟಿಗೊಳಿಸುತ್ತದೆ. ಇದು ತುಂಬಾ ಅಗತ್ಯವಾದ ಹೆಣಿಗೆಯಾಗಿದೆ.

ಅಂಗನವಾಡಿಗಳನ್ನ ಸರಕಾರಿ ಶಾಲೆಗಳ ಆವರಣಕ್ಕೆ ವರ್ಗಾಯಿಸುವುದರಿಂದ ಅಂಗನವಾಡಿ ವ್ಯವಸ್ಥೆ ಮತ್ತುಶ್ಟು ಬಲಗೊಳ್ಳುತ್ತದೆ, ಉತ್ತರದಾಯಿತ್ವ ದೊರಕುತ್ತದೆ ಮತ್ತು ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರ ಉದ್ಯೋಗದಲ್ಲಿ ಯಾವುದೆ ಕೊರತೆ, ಬಿಕ್ಕಟ್ಟು ಉಂಟಾಗುವುದಿಲ್ಲ. ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಪೂರ್ವಪ್ರಾಥಮಿಕ ಶಿಕ್ಷಣದ ಕುರಿತಾದ ಬೋದನ ತರಬೇತಿ ನೀಡಿದರೆ ಅವರೆ ಅಲ್ಲಿ ಶಿಕ್ಷಕಿಯರಾಗಿ ಮುಂದುವರೆಯಬಹುದು ಮತ್ತು ಉದ್ಯೋಗ ಬದ್ರತೆಯ ಸಾದ್ಯತೆಯೂ ಖಾತರಿಯಾಗುತ್ತದೆ.

ಪೂರ್ವ ಪ್ರಾಥಮಿಕ ಶಿಕ್ಷಣವು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬುನಾದಿಯಿದ್ದಂತೆ. ಇದನ್ನು ಪ್ರತೀ ಸರ್ಕಾರಿ ಶಾಲೆಯಲ್ಲೂ ಆರಂಭಿಸಬೇಕು ಮತ್ತು ಅದರ ನಿರ್ವಹಣೆಗಾಗಿ ಬಜೆಟ್ ಒದಗಿಸುವ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು. ಅಲ್ಲಿಯವರೆಗೆ ಸ್ಥಳೀಯ ಸಮುದಾಯಗಳ ಉತ್ಸಾಹ ಮತ್ತು ಜವಾಬ್ದಾರಿಯಿಂದ ನಡೆಯುತ್ತಿರುವ ಮಕ್ಕಳ ಮನೆಗಳಿಗೆ ತುರ್ತಾಗಿ ನೆರವಾಗಲು ಸರ್ಕಾರ ಮತ್ತು ಜನಪ್ರತಿನಿಧಿಗಳು ಮುಂದಾಗಬೇಕು.

(ಈ ಚರ್ಚೆಯನ್ನು ಮುಂದುವರೆಸಲು ನಾನುಗೌರಿ.ಕಾಂ ಬಯಸುತ್ತದೆ. ಹಾಗಾಗಿ ನಿಮ್ಮ ಅಭಿಪ್ರಾಯಗಳನ್ನು ಬರೆದು [email protected] ಗೆ ಅಥವಾ 7353770202 ವಾಟ್ಸಾಪ್ ನಂಬರ್ ಗೆ ಕಳಿಸಬಹುದಾಗಿದೆ.)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಬರೆದಿರುವುದೇನೋ ಸರಿ.‌ಅದು ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ದೃಷ್ಟಿಕೋನ. ಆದರೆ ಅಂಗನವಾಡಿ ಸಂಘಟನೆಗಳ ದೃಷ್ಟಿಕೋನದ ಬಗ್ಗೆಯೂ ಲೇಖನ ಬಂದರೆ ಒಳ್ಳೆಯದು

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...