Homeಚಳವಳಿಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

ಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

- Advertisement -
- Advertisement -

ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಲಾ/ ಎಲ್‌ಎಲ್‌ಎಂ ಕೋರ್ಸ್‌ನ ಟಾಪರ್ ಆದ ವಿದ್ಯಾರ್ಥಿನಿಯೋರ್ವಳು ಪ್ರತಿಭಟನೆಯ ಭಾಗವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವ ಘಟನೆ ನಡೆದಿದೆ.

ಗಗೊಯ್ ಅವರ ವಿರುದ್ಧ ಬಂದ ಲೈಂಗಿಕ ಕಿರುಕುಳ ಆರೋಪಗಳನ್ನು ಸಮರ್ಪಕವಾಗಿ ನಿಭಾಯಿಸದೇ ಅಸೂಕ್ಷ್ಮವಾಗಿ ನಡೆದುಕೊಂಡಿದ್ದಾರೆ, ಹಾಗಾಗಿ ಅವರಿಂದ ಕಾನ್ವೋಕೇಷನ್ ಪ್ರಶಸ್ತಿ ಪಡೆಯುವುದಿಲ್ಲ ಎಂದು ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಘೋಷಿಸಿದ್ದಾರೆ.

ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಅವರು ಸಮಾರಂಭದ ಮುಖ್ಯ ಅತಿಥಿಯಾದ ಗೊಗೊಯ್ ಅವರಿಂದಲೇ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಮುಖ್ಯ ನ್ಯಾಯಮೂರ್ತಿಯಾಗಿ ಗೊಗೊಯ್ ಅವರು ಈ ವಿಶ್ವವಿದ್ಯಾಲಯಕ್ಕೆ ಸಂದರ್ಶಕ ಪ್ರಾಧ್ಯಾಪಕರು ಸಹ ಆಗಿದ್ದಾರೆ. ಈ ವಿದ್ಯಾರ್ಥಿನಿಯ ಪ್ರತಿಭಟತ್ಮಾಕ ನಡೆ ಎಲ್ಲಾ ಕಡೆ ದೊಡ್ಡ ಸುದ್ದಿಯಾಗಿದೆ. ಆ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಹ ವೇದಿಕೆಯಲ್ಲಿದ್ದರು.

“ಕಳೆದ ಕೆಲವು ವಾರಗಳಿಂದ ನಾನು ಸಿಜೆಐ ಗಗೊಯ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಬೇಕೆ ಎಂಬ ಕುರಿತು ನಾನು ತರಗತಿಯಲ್ಲಿ ಏನೆಲ್ಲವನ್ನು ಕಲಿತಿರುವೆನೊ ಅದು ನೈತಿಕ ಪ್ರಶ್ನೆಯಾಗಿ ಕಾಡುತ್ತಿತ್ತು. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಾಗ ಅವರು ಮುಖ್ಯಸ್ಥರಾಗಿರುವ ಸಂಸ್ಥೆ ಅದನ್ನು ಪಾರದರ್ಶಕವಾಗಿ ನಿರ್ವಹಿಸಲು ವಿಫಲವಾಗಿದೆ. ಹಾಗಾಗಿ ಪ್ರಶಸ್ತಿ ಸ್ವೀಕರಿಸುತ್ತಿಲ್ಲ” ಎಂದು ಕಾರ್ವಾ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಏಪ್ರಿಲ್ 19ರಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದರು.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಳು. ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು.

ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದರು. ನಂತರ ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು

ಇದನ್ನೂ ಓದಿ: ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ಹಾಗಾಗಿ ವಿಚಾರಣೆ ನ್ಯಾಯಸಮ್ಮತವಾಗಿ ನಡೆದಿಲ್ಲ ಎಂದು ಆರೋಪಿಸಿರುವ ಕಾನೂನು ಪದವೀಧರೆ ಸರ್ಬಿ ಕಾರ್ವಾ ಈ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಮೂರು ವರ್ಷದ ಹಿಂದೆ ಸಂಶೋಧಕ ರೋಹಿತ್ ವೇಮುಲಾರ ಆತ್ಮಹತ್ಯೆಯನ್ನು ಸಾಂಸ್ಥಿಕ ಹತ್ಯೆ ಎಂದು ಕರೆದು ಆತನ ಸಹಪಾಠಿ ವೆಲ್ಪುಲ ಸುಂಕಣ್ಣ ಎಂಬುವವರು ಸಹ ತನ್ನ ವಿಸಿ ಅಪ್ಪಾ ಸಾಹೇಬ್ ರಿಂದ ತನ್ನ ಡಾಕ್ಟರೇಟ್ ಪದವಿ ಪಡೆಯಲು ವೇದಿಕೆಯ ಮೇಲಿಂದಲೇ ನಿರಾಕರಿಸಿದ್ದರು. ನಂತರ ವೇದಿಕೆಯ ಮೇಲಿದ್ದ ಮತ್ತೊರ್ವ ಅತಿಥಿ ಡಾಕ್ಟರೇಟ್ ಪದವಿಯನ್ನು ಹಸ್ತಾಂತರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...