Homeಚಳವಳಿಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

ಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

- Advertisement -
- Advertisement -

ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಲಾ/ ಎಲ್‌ಎಲ್‌ಎಂ ಕೋರ್ಸ್‌ನ ಟಾಪರ್ ಆದ ವಿದ್ಯಾರ್ಥಿನಿಯೋರ್ವಳು ಪ್ರತಿಭಟನೆಯ ಭಾಗವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವ ಘಟನೆ ನಡೆದಿದೆ.

ಗಗೊಯ್ ಅವರ ವಿರುದ್ಧ ಬಂದ ಲೈಂಗಿಕ ಕಿರುಕುಳ ಆರೋಪಗಳನ್ನು ಸಮರ್ಪಕವಾಗಿ ನಿಭಾಯಿಸದೇ ಅಸೂಕ್ಷ್ಮವಾಗಿ ನಡೆದುಕೊಂಡಿದ್ದಾರೆ, ಹಾಗಾಗಿ ಅವರಿಂದ ಕಾನ್ವೋಕೇಷನ್ ಪ್ರಶಸ್ತಿ ಪಡೆಯುವುದಿಲ್ಲ ಎಂದು ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಘೋಷಿಸಿದ್ದಾರೆ.

ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಅವರು ಸಮಾರಂಭದ ಮುಖ್ಯ ಅತಿಥಿಯಾದ ಗೊಗೊಯ್ ಅವರಿಂದಲೇ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಮುಖ್ಯ ನ್ಯಾಯಮೂರ್ತಿಯಾಗಿ ಗೊಗೊಯ್ ಅವರು ಈ ವಿಶ್ವವಿದ್ಯಾಲಯಕ್ಕೆ ಸಂದರ್ಶಕ ಪ್ರಾಧ್ಯಾಪಕರು ಸಹ ಆಗಿದ್ದಾರೆ. ಈ ವಿದ್ಯಾರ್ಥಿನಿಯ ಪ್ರತಿಭಟತ್ಮಾಕ ನಡೆ ಎಲ್ಲಾ ಕಡೆ ದೊಡ್ಡ ಸುದ್ದಿಯಾಗಿದೆ. ಆ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಹ ವೇದಿಕೆಯಲ್ಲಿದ್ದರು.

“ಕಳೆದ ಕೆಲವು ವಾರಗಳಿಂದ ನಾನು ಸಿಜೆಐ ಗಗೊಯ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಬೇಕೆ ಎಂಬ ಕುರಿತು ನಾನು ತರಗತಿಯಲ್ಲಿ ಏನೆಲ್ಲವನ್ನು ಕಲಿತಿರುವೆನೊ ಅದು ನೈತಿಕ ಪ್ರಶ್ನೆಯಾಗಿ ಕಾಡುತ್ತಿತ್ತು. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಾಗ ಅವರು ಮುಖ್ಯಸ್ಥರಾಗಿರುವ ಸಂಸ್ಥೆ ಅದನ್ನು ಪಾರದರ್ಶಕವಾಗಿ ನಿರ್ವಹಿಸಲು ವಿಫಲವಾಗಿದೆ. ಹಾಗಾಗಿ ಪ್ರಶಸ್ತಿ ಸ್ವೀಕರಿಸುತ್ತಿಲ್ಲ” ಎಂದು ಕಾರ್ವಾ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಏಪ್ರಿಲ್ 19ರಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದರು.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಳು. ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು.

ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದರು. ನಂತರ ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು

ಇದನ್ನೂ ಓದಿ: ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ಹಾಗಾಗಿ ವಿಚಾರಣೆ ನ್ಯಾಯಸಮ್ಮತವಾಗಿ ನಡೆದಿಲ್ಲ ಎಂದು ಆರೋಪಿಸಿರುವ ಕಾನೂನು ಪದವೀಧರೆ ಸರ್ಬಿ ಕಾರ್ವಾ ಈ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಮೂರು ವರ್ಷದ ಹಿಂದೆ ಸಂಶೋಧಕ ರೋಹಿತ್ ವೇಮುಲಾರ ಆತ್ಮಹತ್ಯೆಯನ್ನು ಸಾಂಸ್ಥಿಕ ಹತ್ಯೆ ಎಂದು ಕರೆದು ಆತನ ಸಹಪಾಠಿ ವೆಲ್ಪುಲ ಸುಂಕಣ್ಣ ಎಂಬುವವರು ಸಹ ತನ್ನ ವಿಸಿ ಅಪ್ಪಾ ಸಾಹೇಬ್ ರಿಂದ ತನ್ನ ಡಾಕ್ಟರೇಟ್ ಪದವಿ ಪಡೆಯಲು ವೇದಿಕೆಯ ಮೇಲಿಂದಲೇ ನಿರಾಕರಿಸಿದ್ದರು. ನಂತರ ವೇದಿಕೆಯ ಮೇಲಿದ್ದ ಮತ್ತೊರ್ವ ಅತಿಥಿ ಡಾಕ್ಟರೇಟ್ ಪದವಿಯನ್ನು ಹಸ್ತಾಂತರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...