Homeಚಳವಳಿಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

ಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

- Advertisement -
- Advertisement -

ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಲಾ/ ಎಲ್‌ಎಲ್‌ಎಂ ಕೋರ್ಸ್‌ನ ಟಾಪರ್ ಆದ ವಿದ್ಯಾರ್ಥಿನಿಯೋರ್ವಳು ಪ್ರತಿಭಟನೆಯ ಭಾಗವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವ ಘಟನೆ ನಡೆದಿದೆ.

ಗಗೊಯ್ ಅವರ ವಿರುದ್ಧ ಬಂದ ಲೈಂಗಿಕ ಕಿರುಕುಳ ಆರೋಪಗಳನ್ನು ಸಮರ್ಪಕವಾಗಿ ನಿಭಾಯಿಸದೇ ಅಸೂಕ್ಷ್ಮವಾಗಿ ನಡೆದುಕೊಂಡಿದ್ದಾರೆ, ಹಾಗಾಗಿ ಅವರಿಂದ ಕಾನ್ವೋಕೇಷನ್ ಪ್ರಶಸ್ತಿ ಪಡೆಯುವುದಿಲ್ಲ ಎಂದು ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಘೋಷಿಸಿದ್ದಾರೆ.

ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಅವರು ಸಮಾರಂಭದ ಮುಖ್ಯ ಅತಿಥಿಯಾದ ಗೊಗೊಯ್ ಅವರಿಂದಲೇ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಮುಖ್ಯ ನ್ಯಾಯಮೂರ್ತಿಯಾಗಿ ಗೊಗೊಯ್ ಅವರು ಈ ವಿಶ್ವವಿದ್ಯಾಲಯಕ್ಕೆ ಸಂದರ್ಶಕ ಪ್ರಾಧ್ಯಾಪಕರು ಸಹ ಆಗಿದ್ದಾರೆ. ಈ ವಿದ್ಯಾರ್ಥಿನಿಯ ಪ್ರತಿಭಟತ್ಮಾಕ ನಡೆ ಎಲ್ಲಾ ಕಡೆ ದೊಡ್ಡ ಸುದ್ದಿಯಾಗಿದೆ. ಆ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಹ ವೇದಿಕೆಯಲ್ಲಿದ್ದರು.

“ಕಳೆದ ಕೆಲವು ವಾರಗಳಿಂದ ನಾನು ಸಿಜೆಐ ಗಗೊಯ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಬೇಕೆ ಎಂಬ ಕುರಿತು ನಾನು ತರಗತಿಯಲ್ಲಿ ಏನೆಲ್ಲವನ್ನು ಕಲಿತಿರುವೆನೊ ಅದು ನೈತಿಕ ಪ್ರಶ್ನೆಯಾಗಿ ಕಾಡುತ್ತಿತ್ತು. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಾಗ ಅವರು ಮುಖ್ಯಸ್ಥರಾಗಿರುವ ಸಂಸ್ಥೆ ಅದನ್ನು ಪಾರದರ್ಶಕವಾಗಿ ನಿರ್ವಹಿಸಲು ವಿಫಲವಾಗಿದೆ. ಹಾಗಾಗಿ ಪ್ರಶಸ್ತಿ ಸ್ವೀಕರಿಸುತ್ತಿಲ್ಲ” ಎಂದು ಕಾರ್ವಾ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಏಪ್ರಿಲ್ 19ರಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದರು.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಳು. ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು.

ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದರು. ನಂತರ ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು

ಇದನ್ನೂ ಓದಿ: ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ಹಾಗಾಗಿ ವಿಚಾರಣೆ ನ್ಯಾಯಸಮ್ಮತವಾಗಿ ನಡೆದಿಲ್ಲ ಎಂದು ಆರೋಪಿಸಿರುವ ಕಾನೂನು ಪದವೀಧರೆ ಸರ್ಬಿ ಕಾರ್ವಾ ಈ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಮೂರು ವರ್ಷದ ಹಿಂದೆ ಸಂಶೋಧಕ ರೋಹಿತ್ ವೇಮುಲಾರ ಆತ್ಮಹತ್ಯೆಯನ್ನು ಸಾಂಸ್ಥಿಕ ಹತ್ಯೆ ಎಂದು ಕರೆದು ಆತನ ಸಹಪಾಠಿ ವೆಲ್ಪುಲ ಸುಂಕಣ್ಣ ಎಂಬುವವರು ಸಹ ತನ್ನ ವಿಸಿ ಅಪ್ಪಾ ಸಾಹೇಬ್ ರಿಂದ ತನ್ನ ಡಾಕ್ಟರೇಟ್ ಪದವಿ ಪಡೆಯಲು ವೇದಿಕೆಯ ಮೇಲಿಂದಲೇ ನಿರಾಕರಿಸಿದ್ದರು. ನಂತರ ವೇದಿಕೆಯ ಮೇಲಿದ್ದ ಮತ್ತೊರ್ವ ಅತಿಥಿ ಡಾಕ್ಟರೇಟ್ ಪದವಿಯನ್ನು ಹಸ್ತಾಂತರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...