Homeಚಳವಳಿಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

ಸಿಜೆಐ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಚಿನ್ನದ ಪದಕ ವಿಜೇತೆ. ಕಾರಣ?

- Advertisement -
- Advertisement -

ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಲಾ/ ಎಲ್‌ಎಲ್‌ಎಂ ಕೋರ್ಸ್‌ನ ಟಾಪರ್ ಆದ ವಿದ್ಯಾರ್ಥಿನಿಯೋರ್ವಳು ಪ್ರತಿಭಟನೆಯ ಭಾಗವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವ ಘಟನೆ ನಡೆದಿದೆ.

ಗಗೊಯ್ ಅವರ ವಿರುದ್ಧ ಬಂದ ಲೈಂಗಿಕ ಕಿರುಕುಳ ಆರೋಪಗಳನ್ನು ಸಮರ್ಪಕವಾಗಿ ನಿಭಾಯಿಸದೇ ಅಸೂಕ್ಷ್ಮವಾಗಿ ನಡೆದುಕೊಂಡಿದ್ದಾರೆ, ಹಾಗಾಗಿ ಅವರಿಂದ ಕಾನ್ವೋಕೇಷನ್ ಪ್ರಶಸ್ತಿ ಪಡೆಯುವುದಿಲ್ಲ ಎಂದು ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಘೋಷಿಸಿದ್ದಾರೆ.

ಚಿನ್ನದ ಪದಕ ವಿಜೇತೆ ಸುರ್ಬಿ ಕಾರ್ವಾ ಅವರು ಸಮಾರಂಭದ ಮುಖ್ಯ ಅತಿಥಿಯಾದ ಗೊಗೊಯ್ ಅವರಿಂದಲೇ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಮುಖ್ಯ ನ್ಯಾಯಮೂರ್ತಿಯಾಗಿ ಗೊಗೊಯ್ ಅವರು ಈ ವಿಶ್ವವಿದ್ಯಾಲಯಕ್ಕೆ ಸಂದರ್ಶಕ ಪ್ರಾಧ್ಯಾಪಕರು ಸಹ ಆಗಿದ್ದಾರೆ. ಈ ವಿದ್ಯಾರ್ಥಿನಿಯ ಪ್ರತಿಭಟತ್ಮಾಕ ನಡೆ ಎಲ್ಲಾ ಕಡೆ ದೊಡ್ಡ ಸುದ್ದಿಯಾಗಿದೆ. ಆ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಹ ವೇದಿಕೆಯಲ್ಲಿದ್ದರು.

“ಕಳೆದ ಕೆಲವು ವಾರಗಳಿಂದ ನಾನು ಸಿಜೆಐ ಗಗೊಯ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಬೇಕೆ ಎಂಬ ಕುರಿತು ನಾನು ತರಗತಿಯಲ್ಲಿ ಏನೆಲ್ಲವನ್ನು ಕಲಿತಿರುವೆನೊ ಅದು ನೈತಿಕ ಪ್ರಶ್ನೆಯಾಗಿ ಕಾಡುತ್ತಿತ್ತು. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಾಗ ಅವರು ಮುಖ್ಯಸ್ಥರಾಗಿರುವ ಸಂಸ್ಥೆ ಅದನ್ನು ಪಾರದರ್ಶಕವಾಗಿ ನಿರ್ವಹಿಸಲು ವಿಫಲವಾಗಿದೆ. ಹಾಗಾಗಿ ಪ್ರಶಸ್ತಿ ಸ್ವೀಕರಿಸುತ್ತಿಲ್ಲ” ಎಂದು ಕಾರ್ವಾ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಏಪ್ರಿಲ್ 19ರಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದರು.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಳು. ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು.

ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದರು. ನಂತರ ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು

ಇದನ್ನೂ ಓದಿ: ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ಹಾಗಾಗಿ ವಿಚಾರಣೆ ನ್ಯಾಯಸಮ್ಮತವಾಗಿ ನಡೆದಿಲ್ಲ ಎಂದು ಆರೋಪಿಸಿರುವ ಕಾನೂನು ಪದವೀಧರೆ ಸರ್ಬಿ ಕಾರ್ವಾ ಈ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಮೂರು ವರ್ಷದ ಹಿಂದೆ ಸಂಶೋಧಕ ರೋಹಿತ್ ವೇಮುಲಾರ ಆತ್ಮಹತ್ಯೆಯನ್ನು ಸಾಂಸ್ಥಿಕ ಹತ್ಯೆ ಎಂದು ಕರೆದು ಆತನ ಸಹಪಾಠಿ ವೆಲ್ಪುಲ ಸುಂಕಣ್ಣ ಎಂಬುವವರು ಸಹ ತನ್ನ ವಿಸಿ ಅಪ್ಪಾ ಸಾಹೇಬ್ ರಿಂದ ತನ್ನ ಡಾಕ್ಟರೇಟ್ ಪದವಿ ಪಡೆಯಲು ವೇದಿಕೆಯ ಮೇಲಿಂದಲೇ ನಿರಾಕರಿಸಿದ್ದರು. ನಂತರ ವೇದಿಕೆಯ ಮೇಲಿದ್ದ ಮತ್ತೊರ್ವ ಅತಿಥಿ ಡಾಕ್ಟರೇಟ್ ಪದವಿಯನ್ನು ಹಸ್ತಾಂತರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...