Homeಕರ್ನಾಟಕಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಮೈಸೂರಿನಲ್ಲಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳು ಜಾರಿಯಾಗದ ಹಿನ್ನೆಲೆ ಜುಲೈ 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಮುಖಂಡರು, ಜುಲೈ 10ಕ್ಕೆ ಪಡಿತರ ಯೋಜನೆಗೆ ಅನ್ನಭಾಗ್ಯವೆಂದು ಹೆಸರಿಟ್ಟು 12 ವರ್ಷ ತುಂಬುತ್ತದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ ಎಂದಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ ಹಾಗೂ ಅನ್‌ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡ‌ರ್ ನಿಯಮಾವಳಿ ಪ್ರಕಾರ ಇಎಸ್ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಇದು ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ” ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವರದಾರಾಜು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

2025ರ ಫೆಬ್ರವರಿಯಲ್ಲಿ ಚಿಲ್ಲರೆ ಮತ್ತು ಸಗಟು ಟೆಂಡರ್ ಆಗಿದ್ದು, ಹಲವು ತಾಲೂಕುಗಳಿಗೆ ಟೆಂಡ‌ರ್ ಆಗದೆ ಉಳಿದಿರುವ ಕಾರಣ ಆ ತಾಲೂಕುಗಳಿಗೆ ಕೂಲಿ ಹೆಚ್ಚಳವಾಗದೇ ಅಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. 2025ರ ಫೆಬ್ರವರಿಯಿಂದ ಕ್ವಿಂಟಾಲ್ 5.54 ರೂಪಾಯಿ ನಷ್ಟವಾಗುತ್ತಿದೆ. ಆ ತಾಲೂಕಿಗೆ ತಕ್ಷಣವೇ ಸಗಟು ಮತ್ತು ಚಿಲ್ಲರೆ ಸಾಗಾಣಿಕೆ ಟೆಂಡರ್ ಆದೇಶ ಮಾಡಬೇಕು. ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದ್ದಲ್ಲಿ ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್ ಗೆ 23.62 ರೂಪಾಯಿ ಹಾಗೂ ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಜುಲೈನಿಂದ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90 ರೂಪಾಯಿ ಕಡಿಮೆ ಪಾವತಿ ಮಾಡಿದ್ದು, ಇದರ ಬಗ್ಗೆ 2024ರ ಸೆಪ್ಟಂಬರ್ 20 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಜುಲೈ 10ರಂದು ಮೈಸೂರು ಜಿಲ್ಲೆಯಾದ್ಯಂತ ಕೆಲಸ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ ಮಾಹಿತಿ ನೀಡಿದ್ದಾರೆ.

ರೈತರಿಗೆ ಐತಿಹಾಸಿಕ ಜಯ: ನೈಸ್ ಯೋಜನೆಗೆ ಭೂಸ್ವಾಧೀನ ರದ್ದು; 23 ವರ್ಷಗಳ ಕಾಲ ಅಶೋಕ್ ಖೇಣಿ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ತಿರುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....