Homeಕರ್ನಾಟಕಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಮೈಸೂರಿನಲ್ಲಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳು ಜಾರಿಯಾಗದ ಹಿನ್ನೆಲೆ ಜುಲೈ 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಮುಖಂಡರು, ಜುಲೈ 10ಕ್ಕೆ ಪಡಿತರ ಯೋಜನೆಗೆ ಅನ್ನಭಾಗ್ಯವೆಂದು ಹೆಸರಿಟ್ಟು 12 ವರ್ಷ ತುಂಬುತ್ತದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ ಎಂದಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ ಹಾಗೂ ಅನ್‌ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡ‌ರ್ ನಿಯಮಾವಳಿ ಪ್ರಕಾರ ಇಎಸ್ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಇದು ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ” ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವರದಾರಾಜು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

2025ರ ಫೆಬ್ರವರಿಯಲ್ಲಿ ಚಿಲ್ಲರೆ ಮತ್ತು ಸಗಟು ಟೆಂಡರ್ ಆಗಿದ್ದು, ಹಲವು ತಾಲೂಕುಗಳಿಗೆ ಟೆಂಡ‌ರ್ ಆಗದೆ ಉಳಿದಿರುವ ಕಾರಣ ಆ ತಾಲೂಕುಗಳಿಗೆ ಕೂಲಿ ಹೆಚ್ಚಳವಾಗದೇ ಅಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. 2025ರ ಫೆಬ್ರವರಿಯಿಂದ ಕ್ವಿಂಟಾಲ್ 5.54 ರೂಪಾಯಿ ನಷ್ಟವಾಗುತ್ತಿದೆ. ಆ ತಾಲೂಕಿಗೆ ತಕ್ಷಣವೇ ಸಗಟು ಮತ್ತು ಚಿಲ್ಲರೆ ಸಾಗಾಣಿಕೆ ಟೆಂಡರ್ ಆದೇಶ ಮಾಡಬೇಕು. ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದ್ದಲ್ಲಿ ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್ ಗೆ 23.62 ರೂಪಾಯಿ ಹಾಗೂ ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಜುಲೈನಿಂದ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90 ರೂಪಾಯಿ ಕಡಿಮೆ ಪಾವತಿ ಮಾಡಿದ್ದು, ಇದರ ಬಗ್ಗೆ 2024ರ ಸೆಪ್ಟಂಬರ್ 20 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಜುಲೈ 10ರಂದು ಮೈಸೂರು ಜಿಲ್ಲೆಯಾದ್ಯಂತ ಕೆಲಸ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ ಮಾಹಿತಿ ನೀಡಿದ್ದಾರೆ.

ರೈತರಿಗೆ ಐತಿಹಾಸಿಕ ಜಯ: ನೈಸ್ ಯೋಜನೆಗೆ ಭೂಸ್ವಾಧೀನ ರದ್ದು; 23 ವರ್ಷಗಳ ಕಾಲ ಅಶೋಕ್ ಖೇಣಿ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ತಿರುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...