Homeಕರ್ನಾಟಕಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಮೈಸೂರಿನಲ್ಲಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳು ಜಾರಿಯಾಗದ ಹಿನ್ನೆಲೆ ಜುಲೈ 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಮುಖಂಡರು, ಜುಲೈ 10ಕ್ಕೆ ಪಡಿತರ ಯೋಜನೆಗೆ ಅನ್ನಭಾಗ್ಯವೆಂದು ಹೆಸರಿಟ್ಟು 12 ವರ್ಷ ತುಂಬುತ್ತದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ ಎಂದಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ ಹಾಗೂ ಅನ್‌ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡ‌ರ್ ನಿಯಮಾವಳಿ ಪ್ರಕಾರ ಇಎಸ್ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಇದು ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ” ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವರದಾರಾಜು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

2025ರ ಫೆಬ್ರವರಿಯಲ್ಲಿ ಚಿಲ್ಲರೆ ಮತ್ತು ಸಗಟು ಟೆಂಡರ್ ಆಗಿದ್ದು, ಹಲವು ತಾಲೂಕುಗಳಿಗೆ ಟೆಂಡ‌ರ್ ಆಗದೆ ಉಳಿದಿರುವ ಕಾರಣ ಆ ತಾಲೂಕುಗಳಿಗೆ ಕೂಲಿ ಹೆಚ್ಚಳವಾಗದೇ ಅಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. 2025ರ ಫೆಬ್ರವರಿಯಿಂದ ಕ್ವಿಂಟಾಲ್ 5.54 ರೂಪಾಯಿ ನಷ್ಟವಾಗುತ್ತಿದೆ. ಆ ತಾಲೂಕಿಗೆ ತಕ್ಷಣವೇ ಸಗಟು ಮತ್ತು ಚಿಲ್ಲರೆ ಸಾಗಾಣಿಕೆ ಟೆಂಡರ್ ಆದೇಶ ಮಾಡಬೇಕು. ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದ್ದಲ್ಲಿ ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್ ಗೆ 23.62 ರೂಪಾಯಿ ಹಾಗೂ ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಜುಲೈನಿಂದ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90 ರೂಪಾಯಿ ಕಡಿಮೆ ಪಾವತಿ ಮಾಡಿದ್ದು, ಇದರ ಬಗ್ಗೆ 2024ರ ಸೆಪ್ಟಂಬರ್ 20 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಜುಲೈ 10ರಂದು ಮೈಸೂರು ಜಿಲ್ಲೆಯಾದ್ಯಂತ ಕೆಲಸ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ ಮಾಹಿತಿ ನೀಡಿದ್ದಾರೆ.

ರೈತರಿಗೆ ಐತಿಹಾಸಿಕ ಜಯ: ನೈಸ್ ಯೋಜನೆಗೆ ಭೂಸ್ವಾಧೀನ ರದ್ದು; 23 ವರ್ಷಗಳ ಕಾಲ ಅಶೋಕ್ ಖೇಣಿ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ತಿರುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...