Homeಕರ್ನಾಟಕಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಮೈಸೂರಿನಲ್ಲಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳು ಜಾರಿಯಾಗದ ಹಿನ್ನೆಲೆ ಜುಲೈ 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಮುಖಂಡರು, ಜುಲೈ 10ಕ್ಕೆ ಪಡಿತರ ಯೋಜನೆಗೆ ಅನ್ನಭಾಗ್ಯವೆಂದು ಹೆಸರಿಟ್ಟು 12 ವರ್ಷ ತುಂಬುತ್ತದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ ಎಂದಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ ಹಾಗೂ ಅನ್‌ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡ‌ರ್ ನಿಯಮಾವಳಿ ಪ್ರಕಾರ ಇಎಸ್ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಇದು ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ” ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವರದಾರಾಜು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

2025ರ ಫೆಬ್ರವರಿಯಲ್ಲಿ ಚಿಲ್ಲರೆ ಮತ್ತು ಸಗಟು ಟೆಂಡರ್ ಆಗಿದ್ದು, ಹಲವು ತಾಲೂಕುಗಳಿಗೆ ಟೆಂಡ‌ರ್ ಆಗದೆ ಉಳಿದಿರುವ ಕಾರಣ ಆ ತಾಲೂಕುಗಳಿಗೆ ಕೂಲಿ ಹೆಚ್ಚಳವಾಗದೇ ಅಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. 2025ರ ಫೆಬ್ರವರಿಯಿಂದ ಕ್ವಿಂಟಾಲ್ 5.54 ರೂಪಾಯಿ ನಷ್ಟವಾಗುತ್ತಿದೆ. ಆ ತಾಲೂಕಿಗೆ ತಕ್ಷಣವೇ ಸಗಟು ಮತ್ತು ಚಿಲ್ಲರೆ ಸಾಗಾಣಿಕೆ ಟೆಂಡರ್ ಆದೇಶ ಮಾಡಬೇಕು. ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದ್ದಲ್ಲಿ ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್ ಗೆ 23.62 ರೂಪಾಯಿ ಹಾಗೂ ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಜುಲೈನಿಂದ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90 ರೂಪಾಯಿ ಕಡಿಮೆ ಪಾವತಿ ಮಾಡಿದ್ದು, ಇದರ ಬಗ್ಗೆ 2024ರ ಸೆಪ್ಟಂಬರ್ 20 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಜುಲೈ 10ರಂದು ಮೈಸೂರು ಜಿಲ್ಲೆಯಾದ್ಯಂತ ಕೆಲಸ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ ಮಾಹಿತಿ ನೀಡಿದ್ದಾರೆ.

ರೈತರಿಗೆ ಐತಿಹಾಸಿಕ ಜಯ: ನೈಸ್ ಯೋಜನೆಗೆ ಭೂಸ್ವಾಧೀನ ರದ್ದು; 23 ವರ್ಷಗಳ ಕಾಲ ಅಶೋಕ್ ಖೇಣಿ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ತಿರುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...