Homeಕರ್ನಾಟಕಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಮೈಸೂರಿನಲ್ಲಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳು ಜಾರಿಯಾಗದ ಹಿನ್ನೆಲೆ ಜುಲೈ 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಮುಖಂಡರು, ಜುಲೈ 10ಕ್ಕೆ ಪಡಿತರ ಯೋಜನೆಗೆ ಅನ್ನಭಾಗ್ಯವೆಂದು ಹೆಸರಿಟ್ಟು 12 ವರ್ಷ ತುಂಬುತ್ತದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ ಎಂದಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ ಹಾಗೂ ಅನ್‌ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡ‌ರ್ ನಿಯಮಾವಳಿ ಪ್ರಕಾರ ಇಎಸ್ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಇದು ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ” ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವರದಾರಾಜು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

2025ರ ಫೆಬ್ರವರಿಯಲ್ಲಿ ಚಿಲ್ಲರೆ ಮತ್ತು ಸಗಟು ಟೆಂಡರ್ ಆಗಿದ್ದು, ಹಲವು ತಾಲೂಕುಗಳಿಗೆ ಟೆಂಡ‌ರ್ ಆಗದೆ ಉಳಿದಿರುವ ಕಾರಣ ಆ ತಾಲೂಕುಗಳಿಗೆ ಕೂಲಿ ಹೆಚ್ಚಳವಾಗದೇ ಅಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. 2025ರ ಫೆಬ್ರವರಿಯಿಂದ ಕ್ವಿಂಟಾಲ್ 5.54 ರೂಪಾಯಿ ನಷ್ಟವಾಗುತ್ತಿದೆ. ಆ ತಾಲೂಕಿಗೆ ತಕ್ಷಣವೇ ಸಗಟು ಮತ್ತು ಚಿಲ್ಲರೆ ಸಾಗಾಣಿಕೆ ಟೆಂಡರ್ ಆದೇಶ ಮಾಡಬೇಕು. ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದ್ದಲ್ಲಿ ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್ ಗೆ 23.62 ರೂಪಾಯಿ ಹಾಗೂ ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಜುಲೈನಿಂದ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90 ರೂಪಾಯಿ ಕಡಿಮೆ ಪಾವತಿ ಮಾಡಿದ್ದು, ಇದರ ಬಗ್ಗೆ 2024ರ ಸೆಪ್ಟಂಬರ್ 20 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಜುಲೈ 10ರಂದು ಮೈಸೂರು ಜಿಲ್ಲೆಯಾದ್ಯಂತ ಕೆಲಸ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ ಮಾಹಿತಿ ನೀಡಿದ್ದಾರೆ.

ರೈತರಿಗೆ ಐತಿಹಾಸಿಕ ಜಯ: ನೈಸ್ ಯೋಜನೆಗೆ ಭೂಸ್ವಾಧೀನ ರದ್ದು; 23 ವರ್ಷಗಳ ಕಾಲ ಅಶೋಕ್ ಖೇಣಿ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ತಿರುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...