Homeಕರ್ನಾಟಕಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಬದುಕು ಅತಂತ್ರ; ಜು. 10ರಂದು ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಮೈಸೂರಿನಲ್ಲಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳು ಜಾರಿಯಾಗದ ಹಿನ್ನೆಲೆ ಜುಲೈ 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಮುಖಂಡರು, ಜುಲೈ 10ಕ್ಕೆ ಪಡಿತರ ಯೋಜನೆಗೆ ಅನ್ನಭಾಗ್ಯವೆಂದು ಹೆಸರಿಟ್ಟು 12 ವರ್ಷ ತುಂಬುತ್ತದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ ಎಂದಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ ಹಾಗೂ ಅನ್‌ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡ‌ರ್ ನಿಯಮಾವಳಿ ಪ್ರಕಾರ ಇಎಸ್ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಇದು ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ” ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವರದಾರಾಜು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

2025ರ ಫೆಬ್ರವರಿಯಲ್ಲಿ ಚಿಲ್ಲರೆ ಮತ್ತು ಸಗಟು ಟೆಂಡರ್ ಆಗಿದ್ದು, ಹಲವು ತಾಲೂಕುಗಳಿಗೆ ಟೆಂಡ‌ರ್ ಆಗದೆ ಉಳಿದಿರುವ ಕಾರಣ ಆ ತಾಲೂಕುಗಳಿಗೆ ಕೂಲಿ ಹೆಚ್ಚಳವಾಗದೇ ಅಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. 2025ರ ಫೆಬ್ರವರಿಯಿಂದ ಕ್ವಿಂಟಾಲ್ 5.54 ರೂಪಾಯಿ ನಷ್ಟವಾಗುತ್ತಿದೆ. ಆ ತಾಲೂಕಿಗೆ ತಕ್ಷಣವೇ ಸಗಟು ಮತ್ತು ಚಿಲ್ಲರೆ ಸಾಗಾಣಿಕೆ ಟೆಂಡರ್ ಆದೇಶ ಮಾಡಬೇಕು. ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದ್ದಲ್ಲಿ ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್ ಗೆ 23.62 ರೂಪಾಯಿ ಹಾಗೂ ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಜುಲೈನಿಂದ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90 ರೂಪಾಯಿ ಕಡಿಮೆ ಪಾವತಿ ಮಾಡಿದ್ದು, ಇದರ ಬಗ್ಗೆ 2024ರ ಸೆಪ್ಟಂಬರ್ 20 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಜುಲೈ 10ರಂದು ಮೈಸೂರು ಜಿಲ್ಲೆಯಾದ್ಯಂತ ಕೆಲಸ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ ಮಾಹಿತಿ ನೀಡಿದ್ದಾರೆ.

ರೈತರಿಗೆ ಐತಿಹಾಸಿಕ ಜಯ: ನೈಸ್ ಯೋಜನೆಗೆ ಭೂಸ್ವಾಧೀನ ರದ್ದು; 23 ವರ್ಷಗಳ ಕಾಲ ಅಶೋಕ್ ಖೇಣಿ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ತಿರುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...