Homeಚಳವಳಿಯಶವಂತಪುರ ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕರ ಬೃಹತ್‌ ಪ್ರತಿಭಟನೆ

ಯಶವಂತಪುರ ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಯಶವಂತಪುರ ಎಪಿಎಂಸಿಯಲ್ಲಿ ಕೆಲಸ ಮಾಡುವ 3000 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರು ಕೋವಿಡ್‌ ಪರಿಹಾರ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಒಕ್ಕೂಟ (ಸಿಐಟಿಯು) ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಅರ್ಧ ದಿನಗಳ ಕಾಲ ಕೆಲಸ ಬಹಿಷ್ಕರಿಸಿದ್ದಾರೆ.

ದೇಶವು 5ನೇ ಹಂತದ ಲಾಕ್‌ಡೌನ್‌ಗೆ ತೆರಳುತ್ತಿದ್ದರೂ ಹಮಾಲಿ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳು ಲಭಿಸಿಲ್ಲ. ಅತಿ ದೊಡ್ಡ ಎಪಿಎಂಸಿಯಾದ ಯಶವಂತಪುರದಲ್ಲಿ 2000 ಮಹಿಳೆಯರು ಸೇರಿದಂತೆ 5000 ಕಾರ್ಮಿಕರು ತಮ್ಮ ಜೀವನ ನಿರ್ವಹಣೆಗಾಗಿ ಹೆಣಗಾಡುತ್ತಿದ್ದಾರೆ. ಮುಖ್ಯವಾಗಿ ಮಹಿಳಾ ಕಾರ್ಮಿಕರಿಗೆ ಕನಿಷ್ಟ ವೇತನ, ರಜೆಗಳು ಮತ್ತು ಇತರ ಸಾಮಾಜಿಕ ಭದ್ರತೆಯಂತಹ ಎಲ್ಲಾ ಕಾನೂನುಬದ್ಧ ಪ್ರಯೋಜನಗಳು ದೊರಕುತ್ತಿಲ್ಲ ಎಂದು ಒಕ್ಕೂಟದ ರಾಜ್ಯಧ್ಯಕ್ಷ ಕೆ. ಮಹಾಂತೇಶ್ ಆರೋಪಿಸಿದ್ದಾರೆ.

‌ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಮತ್ತು ಮಹಾಲಕ್ಷ್ಮಿಪುರಂನ ಶಾಸಕ ಗೋಪಾಲಯ್ಯನವರ ವ್ಯಾಪ್ತಿಗೆ ಈ ಎಪಿಎಂಸಿ ಬರುತ್ತದೆ. ಅವರು ನಿನ್ನೆ ಅವರು ಯೂನಿಯನ್ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದರು. ಆದರೂ ಕಾರ್ಮಿಕರ ಸಮಸ್ಯೆಗಳು ಬಗೆಹರಿದ ಕಾರಣ ಕೆಲಸ ಬಹಿಷ್ಕರಿಸಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಮಹಾಂತೇಶ್ ತಿಳಿಸಿದ್ದಾರೆ.

Posted by Mahantesh Kariyappa on Saturday, May 30, 2020

ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್‌ ಪಡೆಯಬೇಕು, ಅನ್ಯ ರಾಜ್ಯದಿಂದ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕೆಂದು, ಹಮಾಲಿಗಳಿಗೆ ಸಮರ್ಪಕ ಕೂಲಿ ಸಿಗುವಂತೆ ವ್ಯವಸ್ಥೆ ಮಾಡಬೇಕೆಂಬ ಹಕ್ಕೊತ್ತಾಯಗಳನ್ನು ಇಲಾಖೆಯ ರಾಜ್ಯದ ಹೆಚ್ಚುವರಿ ನಿರ್ದೇಶಕ ಡಾ.ಅನಿಲಕುಮಾರ್‌ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿದರು.

ತದನಂತರ ಸಚಿವ ಗೋಪಾಲಯ್ಯನವರು ಕಾರ್ಮಿಕರ ಕುಟುಂಬಕ್ಕೆ 2000 ಪಡಿತರ ಕಿಟ್‌ಗಳನ್ನು ವಿತರಿಸಲು ಒಪ್ಪಿಕೊಂಡಿದ್ದು, ಎಲ್ಲಾ ಸಮಸ್ಯೆಗಳ ಕುರಿತು ಕೂಲಂಕುಷವಾದ ಚರ್ಚೆಗಾಗಿ ಜೂನ್‌ 4ರಂದು ಸಭೆ ಕರೆಯಲು ಒಪ್ಪಿದರು. ಅವರ ಭರವಸೆಯ ನಂತರ ಕಾರ್ಮಿಕರು ದಿನವಿಡೀ ನಡೆಸಲು ತೀರ್ಮಾನಿಸಿದ್ದ ಆಂದೋಲನವನ್ನು ಅರ್ಧ ದಿನಕ್ಕೆ ಹಿಂಪಡೆದರು.

ಎಪಿಎಂಸಿ ಯಾರ್ಡ್‌ ಮಹಿಳಾ ಕಾರ್ಮಿಕರ ಸಂಘ, ಎಪಿಎಂಸಿ ಮಂಡಿ ಹಮಾಲಿ ಕಾರ್ಮಿಕರ ಸಂಘ, ಲೋಡಿಂಗ್‌ ಅನ್‌ಲೋಡಿಂಗ್‌ ಜನರಲ್‌ ವರ್ಕರ್ಸ್‌ ಯೂನಿಯನ್‌, ರೆಗ್ಯೂಲೇಟೆಡ್ ವರ್ಕರ್ಸ್‌ ಯೂನಿಯನ್‌ ಇತ್ಯಾದಿ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಭಾಗವಹಿಸಿದ್ದವು. ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್ ವರಲಕ್ಷ್ಮಿ ಉಪಸ್ಥಿತರಿದ್ದರು.


ಇದನ್ನೂ ಓದಿ: ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. 


Also Read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...