Homeಚಳವಳಿಯಶವಂತಪುರ ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕರ ಬೃಹತ್‌ ಪ್ರತಿಭಟನೆ

ಯಶವಂತಪುರ ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಯಶವಂತಪುರ ಎಪಿಎಂಸಿಯಲ್ಲಿ ಕೆಲಸ ಮಾಡುವ 3000 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರು ಕೋವಿಡ್‌ ಪರಿಹಾರ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಒಕ್ಕೂಟ (ಸಿಐಟಿಯು) ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಅರ್ಧ ದಿನಗಳ ಕಾಲ ಕೆಲಸ ಬಹಿಷ್ಕರಿಸಿದ್ದಾರೆ.

ದೇಶವು 5ನೇ ಹಂತದ ಲಾಕ್‌ಡೌನ್‌ಗೆ ತೆರಳುತ್ತಿದ್ದರೂ ಹಮಾಲಿ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳು ಲಭಿಸಿಲ್ಲ. ಅತಿ ದೊಡ್ಡ ಎಪಿಎಂಸಿಯಾದ ಯಶವಂತಪುರದಲ್ಲಿ 2000 ಮಹಿಳೆಯರು ಸೇರಿದಂತೆ 5000 ಕಾರ್ಮಿಕರು ತಮ್ಮ ಜೀವನ ನಿರ್ವಹಣೆಗಾಗಿ ಹೆಣಗಾಡುತ್ತಿದ್ದಾರೆ. ಮುಖ್ಯವಾಗಿ ಮಹಿಳಾ ಕಾರ್ಮಿಕರಿಗೆ ಕನಿಷ್ಟ ವೇತನ, ರಜೆಗಳು ಮತ್ತು ಇತರ ಸಾಮಾಜಿಕ ಭದ್ರತೆಯಂತಹ ಎಲ್ಲಾ ಕಾನೂನುಬದ್ಧ ಪ್ರಯೋಜನಗಳು ದೊರಕುತ್ತಿಲ್ಲ ಎಂದು ಒಕ್ಕೂಟದ ರಾಜ್ಯಧ್ಯಕ್ಷ ಕೆ. ಮಹಾಂತೇಶ್ ಆರೋಪಿಸಿದ್ದಾರೆ.

‌ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಮತ್ತು ಮಹಾಲಕ್ಷ್ಮಿಪುರಂನ ಶಾಸಕ ಗೋಪಾಲಯ್ಯನವರ ವ್ಯಾಪ್ತಿಗೆ ಈ ಎಪಿಎಂಸಿ ಬರುತ್ತದೆ. ಅವರು ನಿನ್ನೆ ಅವರು ಯೂನಿಯನ್ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದರು. ಆದರೂ ಕಾರ್ಮಿಕರ ಸಮಸ್ಯೆಗಳು ಬಗೆಹರಿದ ಕಾರಣ ಕೆಲಸ ಬಹಿಷ್ಕರಿಸಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಮಹಾಂತೇಶ್ ತಿಳಿಸಿದ್ದಾರೆ.

Posted by Mahantesh Kariyappa on Saturday, May 30, 2020

ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್‌ ಪಡೆಯಬೇಕು, ಅನ್ಯ ರಾಜ್ಯದಿಂದ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕೆಂದು, ಹಮಾಲಿಗಳಿಗೆ ಸಮರ್ಪಕ ಕೂಲಿ ಸಿಗುವಂತೆ ವ್ಯವಸ್ಥೆ ಮಾಡಬೇಕೆಂಬ ಹಕ್ಕೊತ್ತಾಯಗಳನ್ನು ಇಲಾಖೆಯ ರಾಜ್ಯದ ಹೆಚ್ಚುವರಿ ನಿರ್ದೇಶಕ ಡಾ.ಅನಿಲಕುಮಾರ್‌ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿದರು.

ತದನಂತರ ಸಚಿವ ಗೋಪಾಲಯ್ಯನವರು ಕಾರ್ಮಿಕರ ಕುಟುಂಬಕ್ಕೆ 2000 ಪಡಿತರ ಕಿಟ್‌ಗಳನ್ನು ವಿತರಿಸಲು ಒಪ್ಪಿಕೊಂಡಿದ್ದು, ಎಲ್ಲಾ ಸಮಸ್ಯೆಗಳ ಕುರಿತು ಕೂಲಂಕುಷವಾದ ಚರ್ಚೆಗಾಗಿ ಜೂನ್‌ 4ರಂದು ಸಭೆ ಕರೆಯಲು ಒಪ್ಪಿದರು. ಅವರ ಭರವಸೆಯ ನಂತರ ಕಾರ್ಮಿಕರು ದಿನವಿಡೀ ನಡೆಸಲು ತೀರ್ಮಾನಿಸಿದ್ದ ಆಂದೋಲನವನ್ನು ಅರ್ಧ ದಿನಕ್ಕೆ ಹಿಂಪಡೆದರು.

ಎಪಿಎಂಸಿ ಯಾರ್ಡ್‌ ಮಹಿಳಾ ಕಾರ್ಮಿಕರ ಸಂಘ, ಎಪಿಎಂಸಿ ಮಂಡಿ ಹಮಾಲಿ ಕಾರ್ಮಿಕರ ಸಂಘ, ಲೋಡಿಂಗ್‌ ಅನ್‌ಲೋಡಿಂಗ್‌ ಜನರಲ್‌ ವರ್ಕರ್ಸ್‌ ಯೂನಿಯನ್‌, ರೆಗ್ಯೂಲೇಟೆಡ್ ವರ್ಕರ್ಸ್‌ ಯೂನಿಯನ್‌ ಇತ್ಯಾದಿ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಭಾಗವಹಿಸಿದ್ದವು. ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್ ವರಲಕ್ಷ್ಮಿ ಉಪಸ್ಥಿತರಿದ್ದರು.


ಇದನ್ನೂ ಓದಿ: ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. 


Also Read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...