Homeಕರ್ನಾಟಕಲೋಡಿಂಗ್‌-ಅನ್‌ಲೋಡಿಂಗ್‌ ಕಾರ್ಮಿಕರ ವೇತನ ಹೆಚ್ಚಳಕ್ಕೆ ಆಗ್ರಹ: ಫೆ.15ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ

ಲೋಡಿಂಗ್‌-ಅನ್‌ಲೋಡಿಂಗ್‌ ಕಾರ್ಮಿಕರ ವೇತನ ಹೆಚ್ಚಳಕ್ಕೆ ಆಗ್ರಹ: ಫೆ.15ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

2023-24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು, ಲೋಡಿಂಗ್‌-ಅನ್‌ಲೋಡಿಂಗ್‌ ಕಾರ್ಮಿಕರ ವೇತನ ಹೆಚ್ಚಿಸಬೇಕು, ಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಯಡಿ ತುರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ.15ರಿಂದ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಲೋಡಿಂಗ್‌ ಹಾಗೂ ಅನ್‌ಲೋಡಿಂಗ್‌ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವರದರಾಜೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಈಗಾಗಲೇ ”ಬಿಬಿಎಂಪಿ, ನಗರಸಭೆ, ಪುರಸಭೆಯ ಪೌರಕಾರ್ಮಿಕರ ವೇತನವನ್ನು ನೇರ ಪಾವತಿ ವ್ಯವಸ್ಥೆಗೆ ತರಲಾಗಿದೆ. ಅದೇ ಮಾದರಿಯಲ್ಲಿ ಅನ್ನಭಾಗ್ಯ ಕಾರ್ಮಿಕರನ್ನು ಸಹ ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಬೇಕು. ಈ ಕಾರ್ಮಿಕರು ವಾರದ ರಜೆ, ಸಾರ್ವತ್ರಿಕ ರಾಜೆ ದಿನ, ಹಬ್ಬದ ಸಂದರ್ಭಗಳಲ್ಲೂ ದುಡಿಯುತ್ತಿದ್ದಾರೆ. ಹಾಗಾಗಿ ಕಾನೂನು ಪ್ರಕಾರ ಸಿಗಬೇಕಾದ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ಸಿಗುವಂತೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

”ನಮ್ಮ ಸಂಘಟನೆಯ ನಿರಂತರ ಹೋರಾಟದ ಫಲವಾಗಿ ಈ ಹಿಂದಿನ ಸರ್ಕಾರಗಳು ಆಗಿಂದಾಗ್ಗೆ ಅನ್‌ ಲೋಡಿಂಗ್‌ ಕೂಲಿ ದರವನ್ನು ಹೆಚ್ಚಿಸುತ್ತಾ ಬಂದಿವೆ. ಈ ಹಿಂದೆ 2011-(ಪ್ರತಿಕ್ವಿಂಟಾಲ್‌ಗೆ) 4ರೂಗಳಿಂದ 6ರೂ.ಗೆ ಹೆಚ್ಚಿಸಲಾಗಿತ್ತು. 2016-10ರೂ.ಗಳಿಂದ 14ರೂ., 2018- 14ರೂ.ಗಳಿಂದ 16ರೂ.ಗೆ ಹೆಚ್ಚಳ ಮಾಡಿ ಆಯಾ ಸರ್ಕಾರಗಳು ಆದೇಶ ಮಾಡಿರುತ್ತವೆ. ಆದರೆ 2018ರ ನಂತರದಲ್ಲಿ 5ವರ್ಷ ಕಳೆದರೂ ಆಹಾರಧಾನ್ಯಗಳ ಗ್ರಾಮಾಂತರ ಸಾಗಾಣಿಕೆಯ ಲೋಡಿಂಗ್ ಮತ್ತು ಅನ್‌ ಲೋಡಿಂಗ್ ಕೂಲಿ ದರವನ್ನು ಸರ್ಕಾರ ಹೆಚ್ಚಳ ಮಾಡಿಲ್ಲ.”

”ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು 2022-2024ರ ಗ್ರಾಮಾಂತರ ಚಿಲ್ಲರೆ ಸಾಗಾಣಿಕೆ ಟೆಂಡರ್ ಕರೆದು ಅಂತಿಮಗೊಳಿಸಿದ ಟೆಂಡರ್‌ನಲ್ಲಿ ಹಮಾಲಿ ಕಾರ್ಮಿಕರ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿದರ ಬೆಂಚ್ ಮಾರ್ಕ್ ದರ ಕ್ವಿಂಟಾಲ್16ರೂ ನಿಗದಿ ಮಾಡಿದೆ. ಆದರೆ ಅದು2018ರಲ್ಲಿ ನಿಗದಿ ಮಾಡಿದ ಕೂಲಿ ದರದಷ್ಟೇ ಇದೆ. ಕಾರ್ಮಿಕ ಇಲಾಖೆಯು ಪ್ರತಿ ವರ್ಷ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆದೇಶ ಮಾಡುವ ತುಟ್ಟಿ ಭತ್ಯೆಯನ್ನು ಕೂಡಾ ಇದರಲ್ಲಿ ಒಳಗೊಂಡಿಲ್ಲ, ಅಷ್ಟೇ ಅಲ್ಲದೆ, ಟೆಂಡರ್‌ನಲ್ಲಿ ಕೂಲಿ ದರವನ್ನು ಕಡಿಮೆ ಮಾಡುವ ವಿಚಾರ ಎಲ್ಲಿಯೂ ಪ್ರಸ್ತಾಪವಾಗಿಲ್ಲವಾದರೂ ಕೂಡ ಹಲವಾರು ಗುತ್ತಿಗೆದಾರರು ಈಗಿರುವ ಕೂಲಿ ದರವನ್ನು ಕಾನೂನು ಬಾಹಿರವಾಗಿ ಇನ್ನೂ ಇಳಿಸಿ 16ರ ಬದಲು 14 ರೂಗಳನ್ನು ನೀಡಿ ಕಾರ್ಮಿಕರಿಗೆ ವಂಚನೆ ಮಾಡುತ್ತಿದ್ದಾರೆ. ಈ ವಿಚಾರವನ್ನು ಹಲವಾರು ಬಾರಿ ಇಲಾಖೆಯ ಗಮನಕ್ಕೆ ತರಲಾಗಿದ್ದರೂ ಇದನ್ನು ತಡೆಗಟ್ಟಿ ಕಾರ್ಮಿಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳದಿರುವುದು ಕಾರ್ಮಿಕರಲ್ಲಿ ಅಪಾರವಾದ ಆಕ್ರೋಶವನ್ನು ಮೂಡಿಸಿದೆ.”

ಇದನ್ನೂ ಓದಿ: ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಸಂಘಟನೆಯಿಂದ ಬೃಹತ್ ರ್‍ಯಾಲಿ

”ಸಾಂಕ್ರಾಮಿಕ ರೋಗ ಕೋವಿಡ್‌ ಕಾರಣಕ್ಕಾಗಿ 2020ರ ಮಾರ್ಚ್‌ತಿಂಗಳಿನಲ್ಲಿ ದಿಢೀರೆಂದು ಲಾಕ್‌ಡೌನ್ ಮತ್ತು 2021ರ ಏಪ್ರಿಲ್‌ನಲ್ಲಿ 2ನೇ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಯಾವುದೇ ಸೌಲಭ್ಯಗಳು ನಮಗೆ ಸಿಗದಿದ್ದರು ಜೀವದ ಹಂಗನ್ನು ತೊರೆದು ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಆಹಾರ ಧಾನ್ಯಗಳ ಸರಬರಾಜು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ ಕೆಲಸವನ್ನು ನಿರ್ವಹಿಸಿಕೊಂಡು ಬಂದಿರುತ್ತೇವೆ. ಈ ಲಾಕ್‌ಡೌನ್ ಸಂದರ್ಭದಲ್ಲಿ ಅನ್ನಭಾಗ್ಯ ಪಡಿತದ ಜಾರಿ ಮಾಡುವ ಹಮಾಲಿ ಕಾರ್ಮಿಕರನ್ನು ಕೋವಿಡ್ ವಾರಿಯ‌ರ್ ಎಂದು ಘೋಷಿಸಲು ಹಲವು ಮನವಿ ಪತ್ರಗಳನ್ನು ನೀಡಿದ್ದರೂ ಸರ್ಕಾರ ಕೋವಿಡ್ ವಾರಿಯರ್ಸ್ ಎಂದು ಕೊನೆಗೂ ಘೋಷಣೆ ಮಾಡಲಿಲ್ಲ ಬದಲಿಗೆ ಪೋಲಿಸರ ಲಾಟಿ ಏಟು ತಿನ್ನಬೇಕಾಗಿ ಬಂದದ್ದೇ ನಮ್ಮ ಭಾಗ್ಯವಾಯಿತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಗೋದಾಮುಗಳಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ ಇಲ್ಲವಾಗಿದೆ. ಇದರ ಜೊತೆಗೆ ಆಹಾರ ಮತ್ತು ಸರಬರಾಜು ಇಲಾಖೆಯಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಣೆ ನಡೆಸುವವರು ಆಯುಕ್ತರೇ, ಕೆಎಫ್‌ಸಿಎಸ್ಸಿ ನಿಗಮದ ವ್ಯವಸ್ಥಾಪಕರೇ ಅಥವಾ ಜಿಲ್ಲಾಧಿಕಾರಿಗಳೇ ಎಂಬುದು ಗೊತ್ತಾಗುತ್ತಿಲ್ಲ. ಈ ಗೊಂದಲವನ್ನು ನಿವಾರಿಸಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ಹಕ್ಕೋತ್ತಾಯಗಳು:-

  1. ಗ್ರಾಮಾಂತರ ಸಾಗಾಣಿಕೆ ಆಹಾರ ಧಾನ್ಯಗಳ ಗೋದಾಮಿನಿಂದ ಸ್ಕೇಲ್‌ಗೆ, ಸ್ಕೇಲ್‌ನಿಂದ ಲಾರಿಗೆ, ಲಾರಿಯಿಂದ ನ್ಯಾಯಬೆಲೆ ಅಂಗಡಿಗೆ ಅನ್‌ಲೋಡಿಂಗ್‌ ಮಾಡುವ ಮೂರು ಕೆಲಸಕ್ಕೆ ಕ್ವಿಂಟಲ್‌ಗೆ ಕನಿಷ್ಟ 36ರೂ.ನಿಗದಿ ಮಾಡಬೇಕು.
  2. ಅನ್ನಭಾಗ್ಯ ಹಮಾಲಿ ಕಾರ್ಮಿಕರಿಗೆ ಆಹಾರ ಇಲಾಖೆಯಿಂದಲೇ ನೇರವಾಗಿ ಸಂಬಳ ಪಾವತಿಯಾಗುವಂತೆ(ಡಿಪಿಎಸ್‌) ಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಯಡಿ ತರಬೇಕು.
  3. ರಜಾ ದಿನಗಳಲ್ಲಿ ಕೆಲಸ ಮಾಡುವಾಗ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಬೇಕು.
  4. ಕೆಲಸ ಮಾಡುವ ಜಾಗದಲ್ಲಿ ಮೂಲಭೂತ ಸೌಲಭ್ಯ ಹೆಚ್ಚಿಸಬೇಕು.
  5. ತುಟ್ಟಿಭತ್ಯೆಗೆ ಅನುಗುಣವಾಗಿ ಪ್ರತಿವರ್ಷ ಎ.1ರಿಂದ ಜಾರಿಗೆ ಬರುವಂತೆ ಪ್ರತಿವರ್ಷ ಕೂಲಿದರ ಹೆಚ್ಚಿಸಬೇಕು.
  6. ಗುತ್ತಿಗೆದಾರರ ಪಾಲಿನ ಇಎಸ್‌ಐ ಮತ್ತು ಪಿಎಫ್‌ ವಂತಿಗೆಯನ್ನು ಪಾವತಿಸಲು ಸೂಕ್ತಕ್ರಮ ವಹಿಸಬೇಕು. ಅನ್ನಭಾಗ್ಯ ಯೋಜನೆಯ ಹಮಾಲಿ ಕಾರ್ಮಿಕರಿಗೆ ಗ್ರಾಚ್ಯುಟಿ ಪಾವತಿಸಲು ಕ್ರಮ ವಹಿಸಬೇಕು.
  7. ಆಹಾರ ಇಲಾಖೆಯಿಂದ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...