Homeಕರ್ನಾಟಕಲೋಡಿಂಗ್‌-ಅನ್‌ಲೋಡಿಂಗ್‌ ಕಾರ್ಮಿಕರ ವೇತನ ಹೆಚ್ಚಳಕ್ಕೆ ಆಗ್ರಹ: ಫೆ.15ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ

ಲೋಡಿಂಗ್‌-ಅನ್‌ಲೋಡಿಂಗ್‌ ಕಾರ್ಮಿಕರ ವೇತನ ಹೆಚ್ಚಳಕ್ಕೆ ಆಗ್ರಹ: ಫೆ.15ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

2023-24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು, ಲೋಡಿಂಗ್‌-ಅನ್‌ಲೋಡಿಂಗ್‌ ಕಾರ್ಮಿಕರ ವೇತನ ಹೆಚ್ಚಿಸಬೇಕು, ಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಯಡಿ ತುರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ.15ರಿಂದ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಲೋಡಿಂಗ್‌ ಹಾಗೂ ಅನ್‌ಲೋಡಿಂಗ್‌ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವರದರಾಜೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಈಗಾಗಲೇ ”ಬಿಬಿಎಂಪಿ, ನಗರಸಭೆ, ಪುರಸಭೆಯ ಪೌರಕಾರ್ಮಿಕರ ವೇತನವನ್ನು ನೇರ ಪಾವತಿ ವ್ಯವಸ್ಥೆಗೆ ತರಲಾಗಿದೆ. ಅದೇ ಮಾದರಿಯಲ್ಲಿ ಅನ್ನಭಾಗ್ಯ ಕಾರ್ಮಿಕರನ್ನು ಸಹ ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಬೇಕು. ಈ ಕಾರ್ಮಿಕರು ವಾರದ ರಜೆ, ಸಾರ್ವತ್ರಿಕ ರಾಜೆ ದಿನ, ಹಬ್ಬದ ಸಂದರ್ಭಗಳಲ್ಲೂ ದುಡಿಯುತ್ತಿದ್ದಾರೆ. ಹಾಗಾಗಿ ಕಾನೂನು ಪ್ರಕಾರ ಸಿಗಬೇಕಾದ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ಸಿಗುವಂತೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

”ನಮ್ಮ ಸಂಘಟನೆಯ ನಿರಂತರ ಹೋರಾಟದ ಫಲವಾಗಿ ಈ ಹಿಂದಿನ ಸರ್ಕಾರಗಳು ಆಗಿಂದಾಗ್ಗೆ ಅನ್‌ ಲೋಡಿಂಗ್‌ ಕೂಲಿ ದರವನ್ನು ಹೆಚ್ಚಿಸುತ್ತಾ ಬಂದಿವೆ. ಈ ಹಿಂದೆ 2011-(ಪ್ರತಿಕ್ವಿಂಟಾಲ್‌ಗೆ) 4ರೂಗಳಿಂದ 6ರೂ.ಗೆ ಹೆಚ್ಚಿಸಲಾಗಿತ್ತು. 2016-10ರೂ.ಗಳಿಂದ 14ರೂ., 2018- 14ರೂ.ಗಳಿಂದ 16ರೂ.ಗೆ ಹೆಚ್ಚಳ ಮಾಡಿ ಆಯಾ ಸರ್ಕಾರಗಳು ಆದೇಶ ಮಾಡಿರುತ್ತವೆ. ಆದರೆ 2018ರ ನಂತರದಲ್ಲಿ 5ವರ್ಷ ಕಳೆದರೂ ಆಹಾರಧಾನ್ಯಗಳ ಗ್ರಾಮಾಂತರ ಸಾಗಾಣಿಕೆಯ ಲೋಡಿಂಗ್ ಮತ್ತು ಅನ್‌ ಲೋಡಿಂಗ್ ಕೂಲಿ ದರವನ್ನು ಸರ್ಕಾರ ಹೆಚ್ಚಳ ಮಾಡಿಲ್ಲ.”

”ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು 2022-2024ರ ಗ್ರಾಮಾಂತರ ಚಿಲ್ಲರೆ ಸಾಗಾಣಿಕೆ ಟೆಂಡರ್ ಕರೆದು ಅಂತಿಮಗೊಳಿಸಿದ ಟೆಂಡರ್‌ನಲ್ಲಿ ಹಮಾಲಿ ಕಾರ್ಮಿಕರ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿದರ ಬೆಂಚ್ ಮಾರ್ಕ್ ದರ ಕ್ವಿಂಟಾಲ್16ರೂ ನಿಗದಿ ಮಾಡಿದೆ. ಆದರೆ ಅದು2018ರಲ್ಲಿ ನಿಗದಿ ಮಾಡಿದ ಕೂಲಿ ದರದಷ್ಟೇ ಇದೆ. ಕಾರ್ಮಿಕ ಇಲಾಖೆಯು ಪ್ರತಿ ವರ್ಷ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆದೇಶ ಮಾಡುವ ತುಟ್ಟಿ ಭತ್ಯೆಯನ್ನು ಕೂಡಾ ಇದರಲ್ಲಿ ಒಳಗೊಂಡಿಲ್ಲ, ಅಷ್ಟೇ ಅಲ್ಲದೆ, ಟೆಂಡರ್‌ನಲ್ಲಿ ಕೂಲಿ ದರವನ್ನು ಕಡಿಮೆ ಮಾಡುವ ವಿಚಾರ ಎಲ್ಲಿಯೂ ಪ್ರಸ್ತಾಪವಾಗಿಲ್ಲವಾದರೂ ಕೂಡ ಹಲವಾರು ಗುತ್ತಿಗೆದಾರರು ಈಗಿರುವ ಕೂಲಿ ದರವನ್ನು ಕಾನೂನು ಬಾಹಿರವಾಗಿ ಇನ್ನೂ ಇಳಿಸಿ 16ರ ಬದಲು 14 ರೂಗಳನ್ನು ನೀಡಿ ಕಾರ್ಮಿಕರಿಗೆ ವಂಚನೆ ಮಾಡುತ್ತಿದ್ದಾರೆ. ಈ ವಿಚಾರವನ್ನು ಹಲವಾರು ಬಾರಿ ಇಲಾಖೆಯ ಗಮನಕ್ಕೆ ತರಲಾಗಿದ್ದರೂ ಇದನ್ನು ತಡೆಗಟ್ಟಿ ಕಾರ್ಮಿಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳದಿರುವುದು ಕಾರ್ಮಿಕರಲ್ಲಿ ಅಪಾರವಾದ ಆಕ್ರೋಶವನ್ನು ಮೂಡಿಸಿದೆ.”

ಇದನ್ನೂ ಓದಿ: ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಸಂಘಟನೆಯಿಂದ ಬೃಹತ್ ರ್‍ಯಾಲಿ

”ಸಾಂಕ್ರಾಮಿಕ ರೋಗ ಕೋವಿಡ್‌ ಕಾರಣಕ್ಕಾಗಿ 2020ರ ಮಾರ್ಚ್‌ತಿಂಗಳಿನಲ್ಲಿ ದಿಢೀರೆಂದು ಲಾಕ್‌ಡೌನ್ ಮತ್ತು 2021ರ ಏಪ್ರಿಲ್‌ನಲ್ಲಿ 2ನೇ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಯಾವುದೇ ಸೌಲಭ್ಯಗಳು ನಮಗೆ ಸಿಗದಿದ್ದರು ಜೀವದ ಹಂಗನ್ನು ತೊರೆದು ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಆಹಾರ ಧಾನ್ಯಗಳ ಸರಬರಾಜು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ ಕೆಲಸವನ್ನು ನಿರ್ವಹಿಸಿಕೊಂಡು ಬಂದಿರುತ್ತೇವೆ. ಈ ಲಾಕ್‌ಡೌನ್ ಸಂದರ್ಭದಲ್ಲಿ ಅನ್ನಭಾಗ್ಯ ಪಡಿತದ ಜಾರಿ ಮಾಡುವ ಹಮಾಲಿ ಕಾರ್ಮಿಕರನ್ನು ಕೋವಿಡ್ ವಾರಿಯ‌ರ್ ಎಂದು ಘೋಷಿಸಲು ಹಲವು ಮನವಿ ಪತ್ರಗಳನ್ನು ನೀಡಿದ್ದರೂ ಸರ್ಕಾರ ಕೋವಿಡ್ ವಾರಿಯರ್ಸ್ ಎಂದು ಕೊನೆಗೂ ಘೋಷಣೆ ಮಾಡಲಿಲ್ಲ ಬದಲಿಗೆ ಪೋಲಿಸರ ಲಾಟಿ ಏಟು ತಿನ್ನಬೇಕಾಗಿ ಬಂದದ್ದೇ ನಮ್ಮ ಭಾಗ್ಯವಾಯಿತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಗೋದಾಮುಗಳಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ ಇಲ್ಲವಾಗಿದೆ. ಇದರ ಜೊತೆಗೆ ಆಹಾರ ಮತ್ತು ಸರಬರಾಜು ಇಲಾಖೆಯಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಣೆ ನಡೆಸುವವರು ಆಯುಕ್ತರೇ, ಕೆಎಫ್‌ಸಿಎಸ್ಸಿ ನಿಗಮದ ವ್ಯವಸ್ಥಾಪಕರೇ ಅಥವಾ ಜಿಲ್ಲಾಧಿಕಾರಿಗಳೇ ಎಂಬುದು ಗೊತ್ತಾಗುತ್ತಿಲ್ಲ. ಈ ಗೊಂದಲವನ್ನು ನಿವಾರಿಸಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ಹಕ್ಕೋತ್ತಾಯಗಳು:-

  1. ಗ್ರಾಮಾಂತರ ಸಾಗಾಣಿಕೆ ಆಹಾರ ಧಾನ್ಯಗಳ ಗೋದಾಮಿನಿಂದ ಸ್ಕೇಲ್‌ಗೆ, ಸ್ಕೇಲ್‌ನಿಂದ ಲಾರಿಗೆ, ಲಾರಿಯಿಂದ ನ್ಯಾಯಬೆಲೆ ಅಂಗಡಿಗೆ ಅನ್‌ಲೋಡಿಂಗ್‌ ಮಾಡುವ ಮೂರು ಕೆಲಸಕ್ಕೆ ಕ್ವಿಂಟಲ್‌ಗೆ ಕನಿಷ್ಟ 36ರೂ.ನಿಗದಿ ಮಾಡಬೇಕು.
  2. ಅನ್ನಭಾಗ್ಯ ಹಮಾಲಿ ಕಾರ್ಮಿಕರಿಗೆ ಆಹಾರ ಇಲಾಖೆಯಿಂದಲೇ ನೇರವಾಗಿ ಸಂಬಳ ಪಾವತಿಯಾಗುವಂತೆ(ಡಿಪಿಎಸ್‌) ಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಯಡಿ ತರಬೇಕು.
  3. ರಜಾ ದಿನಗಳಲ್ಲಿ ಕೆಲಸ ಮಾಡುವಾಗ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಬೇಕು.
  4. ಕೆಲಸ ಮಾಡುವ ಜಾಗದಲ್ಲಿ ಮೂಲಭೂತ ಸೌಲಭ್ಯ ಹೆಚ್ಚಿಸಬೇಕು.
  5. ತುಟ್ಟಿಭತ್ಯೆಗೆ ಅನುಗುಣವಾಗಿ ಪ್ರತಿವರ್ಷ ಎ.1ರಿಂದ ಜಾರಿಗೆ ಬರುವಂತೆ ಪ್ರತಿವರ್ಷ ಕೂಲಿದರ ಹೆಚ್ಚಿಸಬೇಕು.
  6. ಗುತ್ತಿಗೆದಾರರ ಪಾಲಿನ ಇಎಸ್‌ಐ ಮತ್ತು ಪಿಎಫ್‌ ವಂತಿಗೆಯನ್ನು ಪಾವತಿಸಲು ಸೂಕ್ತಕ್ರಮ ವಹಿಸಬೇಕು. ಅನ್ನಭಾಗ್ಯ ಯೋಜನೆಯ ಹಮಾಲಿ ಕಾರ್ಮಿಕರಿಗೆ ಗ್ರಾಚ್ಯುಟಿ ಪಾವತಿಸಲು ಕ್ರಮ ವಹಿಸಬೇಕು.
  7. ಆಹಾರ ಇಲಾಖೆಯಿಂದ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...