Homeಮುಖಪುಟಸಾಲ ವಂಚನೆ ಹಗರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಡಿ ದಾಳಿ

ಸಾಲ ವಂಚನೆ ಹಗರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಡಿ ದಾಳಿ

- Advertisement -
- Advertisement -

ಅನಿಲ್ ಅಂಬಾನಿಗೆ ಸಂಬಂಧಿಸಿದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ ರೂ. 3,000 ಕೋಟಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 17ರ ಅಡಿಯಲ್ಲಿ ಇಡಿ ಅಧಿಕಾರಿಗಳು 35ಕ್ಕೂ ಹೆಚ್ಚು ಪ್ರದೇಶಗಳಲ್ಲಿ 50 ಕಂಪನಿಗಳು ಮತ್ತು 25ಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೇಂದ್ರೀಯ ಸಂಸ್ಥೆಯು ಲಂಚ ಮತ್ತು ಸಾಲದ ಶಂಕಿತ ಸಂಬಂಧವನ್ನು ತನಿಖೆ ನಡೆಸುತ್ತಿದೆ ಎಂದು ವರದಿ ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ 2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕಿನಿಂದ ಸುಮಾರು ರೂ. 3,000 ಕೋಟಿಗಳಷ್ಟು ಅಕ್ರಮ ಸಾಲ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಾಲ ನೀಡುವ ಮೊದಲು, ಯೆಸ್ ಬ್ಯಾಂಕಿನ ಪ್ರವರ್ತಕರು (ಪ್ರಮೋಟರ್ಸ್) ತಮ್ಮ ವೈಯಕ್ತಿಕ ಖಾತೆಗಳಲ್ಲಿ ಹಣವನ್ನು ಪಡೆದಿದ್ದಾರೆ ಎಂದು ಇಡಿ ಪತ್ತೆ ಹಚ್ಚಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ರಿಲಯನ್ಸ್ ಕಮ್ಯುನಿಕೇಷನ್ಸ್‌ನ ಸಾಲದ ಖಾತೆ ಮತ್ತು ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿ ಇತ್ತೀಚೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ (ಆರ್‌ಬಿಐ) ವರದಿ ಮಾಡಿತ್ತು. ಈ ವಿಷಯವನ್ನು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸಂಸತ್ತಿಗೆ ತಿಳಿಸಿದ್ದರು. ಎಸ್‌ಬಿಐ ಸಿಬಿಐ ದೂರು ನೀಡಲು ಸಿದ್ದತೆ ನಡೆಸಿದೆ ಎಂದಿದ್ದರು. ಈ ಬೆನ್ನಲ್ಲೇ ಇಡಿ ದಾಳಿ ನಡೆಸಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್‌ ಜೂನ್ 2019 ರಿಂದ ದಿವಾಳಿಯಾಗಿದೆ.

ಎಸ್‌ಬಿಐ ವಂಚನೆ ಎಂದು ವರ್ಗೀಕರಿಸಿದ ಬಳಿಕ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಅದನ್ನು ಅನುಸರಿಸಿ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಆಫ್ ಕಂಪನೀಸ್ (ಆರ್‌ಎಎಜಿಎ) ವಿರುದ್ದ ಇಡಿ ಹಣ ಅಕ್ರಮ ವರ್ಗಾವಣೆಯ ತನಿಖೆ ಕೈಗೊಂಡಿದೆ. ಅದರ ಭಾಗವಾಗಿ ದಾಳಿ ನಡೆದಿದೆ ಎಂದು ವರದಿಗಳು ಹೇಳಿವೆ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್, ಸೆಬಿ, ರಾಷ್ಟ್ರೀಯ ಹಣಕಾಸು ವರದಿ ಪ್ರಾಧಿಕಾರ (ಎನ್‌ಎಫ್‌ಆರ್‌ಎ) ಮತ್ತು ಬ್ಯಾಂಕ್ ಆಫ್ ಬರೋಡಾದಂತಹ ಇತರ ಏಜೆನ್ಸಿಗಳು ಮತ್ತು ಸಂಸ್ಥೆಗಳು ಜಾರಿ ನಿರ್ದೇಶನಾಲಯದೊಂದಿಗೆ ಮಾಹಿತಿಯನ್ನು ಹಂಚಿಕೊಂಡಿವೆ ಎಂದು ವರದಿಗಳು ವಿವರಿಸಿವೆ.

ಬ್ಯಾಂಕುಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನು ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ಬೇರೆಡೆಗೆ ತಿರುಗಿಸಲು ಅಥವಾ ವಂಚಿಸಲು ರೂಪಿಸಲಾದ ಒಂದು ಯೋಜನೆಯ ಬಗ್ಗೆ ಇಡಿ ನಡೆಸಿದ ಪ್ರಾಥಮಿಕ ತನಿಖೆಯು ಬಹಿರಂಗಪಡಿಸಿದೆ.

ಯೆಸ್ ಬ್ಯಾಂಕ್ ಲಿಮಿಟೆಡ್‌ನ ಪ್ರವರ್ತಕ ಸೇರಿದಂತೆ ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ ಅಪರಾಧವೂ ತನಿಖೆಯಲ್ಲಿದೆ ಎಂದು ವರದಿಯಾಗಿದೆ.

ಸಾಲದ ಅನುಮೋದನೆ ಜ್ಞಾಪಕ ಪತ್ರಗಳಿಗೆ ಹಿಂದಿನ ದಿನಾಂಕ ಹಾಕುವುದು, ಸಾಲದ ವಿಶ್ಲೇಷಣೆ ನಡೆಸದೆ ಮಾಡಲಾದ ಹೂಡಿಕೆ ಪ್ರಸ್ತಾವನೆಗಳು ಮತ್ತು ಯೆಸ್ ಬ್ಯಾಂಕಿನ ಸ್ವಂತ ಸಾಲ ನೀತಿಯ ಬಹು ಉಲ್ಲಂಘನೆಗಳು ಸೇರಿದಂತೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಆಫ್ ಕಂಪನೀಸ್‌ಗೆ ಸಾಲ ಅನುಮೋದನೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಉಲ್ಲಂಘನೆಗಳು ನಡೆದಿವೆ ಎಂದು ಇಡಿ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...