Homeಮುಖಪುಟಸಾಲ ವಂಚನೆ ಹಗರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಡಿ ದಾಳಿ

ಸಾಲ ವಂಚನೆ ಹಗರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಡಿ ದಾಳಿ

- Advertisement -
- Advertisement -

ಅನಿಲ್ ಅಂಬಾನಿಗೆ ಸಂಬಂಧಿಸಿದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ ರೂ. 3,000 ಕೋಟಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 17ರ ಅಡಿಯಲ್ಲಿ ಇಡಿ ಅಧಿಕಾರಿಗಳು 35ಕ್ಕೂ ಹೆಚ್ಚು ಪ್ರದೇಶಗಳಲ್ಲಿ 50 ಕಂಪನಿಗಳು ಮತ್ತು 25ಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೇಂದ್ರೀಯ ಸಂಸ್ಥೆಯು ಲಂಚ ಮತ್ತು ಸಾಲದ ಶಂಕಿತ ಸಂಬಂಧವನ್ನು ತನಿಖೆ ನಡೆಸುತ್ತಿದೆ ಎಂದು ವರದಿ ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ 2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕಿನಿಂದ ಸುಮಾರು ರೂ. 3,000 ಕೋಟಿಗಳಷ್ಟು ಅಕ್ರಮ ಸಾಲ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಾಲ ನೀಡುವ ಮೊದಲು, ಯೆಸ್ ಬ್ಯಾಂಕಿನ ಪ್ರವರ್ತಕರು (ಪ್ರಮೋಟರ್ಸ್) ತಮ್ಮ ವೈಯಕ್ತಿಕ ಖಾತೆಗಳಲ್ಲಿ ಹಣವನ್ನು ಪಡೆದಿದ್ದಾರೆ ಎಂದು ಇಡಿ ಪತ್ತೆ ಹಚ್ಚಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ರಿಲಯನ್ಸ್ ಕಮ್ಯುನಿಕೇಷನ್ಸ್‌ನ ಸಾಲದ ಖಾತೆ ಮತ್ತು ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿ ಇತ್ತೀಚೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ (ಆರ್‌ಬಿಐ) ವರದಿ ಮಾಡಿತ್ತು. ಈ ವಿಷಯವನ್ನು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸಂಸತ್ತಿಗೆ ತಿಳಿಸಿದ್ದರು. ಎಸ್‌ಬಿಐ ಸಿಬಿಐ ದೂರು ನೀಡಲು ಸಿದ್ದತೆ ನಡೆಸಿದೆ ಎಂದಿದ್ದರು. ಈ ಬೆನ್ನಲ್ಲೇ ಇಡಿ ದಾಳಿ ನಡೆಸಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್‌ ಜೂನ್ 2019 ರಿಂದ ದಿವಾಳಿಯಾಗಿದೆ.

ಎಸ್‌ಬಿಐ ವಂಚನೆ ಎಂದು ವರ್ಗೀಕರಿಸಿದ ಬಳಿಕ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಅದನ್ನು ಅನುಸರಿಸಿ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಆಫ್ ಕಂಪನೀಸ್ (ಆರ್‌ಎಎಜಿಎ) ವಿರುದ್ದ ಇಡಿ ಹಣ ಅಕ್ರಮ ವರ್ಗಾವಣೆಯ ತನಿಖೆ ಕೈಗೊಂಡಿದೆ. ಅದರ ಭಾಗವಾಗಿ ದಾಳಿ ನಡೆದಿದೆ ಎಂದು ವರದಿಗಳು ಹೇಳಿವೆ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್, ಸೆಬಿ, ರಾಷ್ಟ್ರೀಯ ಹಣಕಾಸು ವರದಿ ಪ್ರಾಧಿಕಾರ (ಎನ್‌ಎಫ್‌ಆರ್‌ಎ) ಮತ್ತು ಬ್ಯಾಂಕ್ ಆಫ್ ಬರೋಡಾದಂತಹ ಇತರ ಏಜೆನ್ಸಿಗಳು ಮತ್ತು ಸಂಸ್ಥೆಗಳು ಜಾರಿ ನಿರ್ದೇಶನಾಲಯದೊಂದಿಗೆ ಮಾಹಿತಿಯನ್ನು ಹಂಚಿಕೊಂಡಿವೆ ಎಂದು ವರದಿಗಳು ವಿವರಿಸಿವೆ.

ಬ್ಯಾಂಕುಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನು ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ಬೇರೆಡೆಗೆ ತಿರುಗಿಸಲು ಅಥವಾ ವಂಚಿಸಲು ರೂಪಿಸಲಾದ ಒಂದು ಯೋಜನೆಯ ಬಗ್ಗೆ ಇಡಿ ನಡೆಸಿದ ಪ್ರಾಥಮಿಕ ತನಿಖೆಯು ಬಹಿರಂಗಪಡಿಸಿದೆ.

ಯೆಸ್ ಬ್ಯಾಂಕ್ ಲಿಮಿಟೆಡ್‌ನ ಪ್ರವರ್ತಕ ಸೇರಿದಂತೆ ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ ಅಪರಾಧವೂ ತನಿಖೆಯಲ್ಲಿದೆ ಎಂದು ವರದಿಯಾಗಿದೆ.

ಸಾಲದ ಅನುಮೋದನೆ ಜ್ಞಾಪಕ ಪತ್ರಗಳಿಗೆ ಹಿಂದಿನ ದಿನಾಂಕ ಹಾಕುವುದು, ಸಾಲದ ವಿಶ್ಲೇಷಣೆ ನಡೆಸದೆ ಮಾಡಲಾದ ಹೂಡಿಕೆ ಪ್ರಸ್ತಾವನೆಗಳು ಮತ್ತು ಯೆಸ್ ಬ್ಯಾಂಕಿನ ಸ್ವಂತ ಸಾಲ ನೀತಿಯ ಬಹು ಉಲ್ಲಂಘನೆಗಳು ಸೇರಿದಂತೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಆಫ್ ಕಂಪನೀಸ್‌ಗೆ ಸಾಲ ಅನುಮೋದನೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಉಲ್ಲಂಘನೆಗಳು ನಡೆದಿವೆ ಎಂದು ಇಡಿ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...