Homeಮುಖಪುಟಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಕಾರಣ ಆರ್‌ಬಿಐ ತನ್ನ ನಿಲುವಿನಂತೆ ಸಾಲ ಮರುಪಾವತಿ ವಿನಯತಿ ಯೋಜನೆಯನ್ನು ವಿಸ್ತರಿಸಲಾರದು/ ಕೇಂದ್ರದ ನಿಲುವು ಇದೇ ಆಗಿತ್ತು.

- Advertisement -
- Advertisement -

ಹಣಕಾಸು ಮತ್ತು ಆರ್ಥಿಕ ಆರೋಗ್ಯದ ವಿಷಯಗಳ ಬಗ್ಗೆ ತಾನು ಪರಿಣತಿಯನ್ನು ಹೊಂದಿಲ್ಲ ಎಂದಿರುವ ಸುಪ್ರೀಂಕೋರ್ಟ್ ಸಾಲ ಪರಿಹಾರ ನೀತಿಯಲ್ಲಿ ಹಸ್ತಕ್ಷೇಪ ಮಾಡಲು ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಷಾ ಅವರ ಸುಪ್ರೀಂ ಕೋರ್ಟ್ ನ್ಯಾಯಪೀಠವು ಲಕ್ಷಾಂತರ ಜನರಿಗೆ ಪರಿಹಾರ ನೀಡುವಂತಹ ಒಂದು ಕ್ರಮದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ನಿಮಿತ್ತ ಸಾಲಗಳ ಮೇಲಿನ ಬಡ್ಡಿ ಪಾವತಿಗಳನ್ನು ಮನ್ನಾ ಮಾಡಬೇಕೆ ಎಂಬ ಅರ್ಜಿಯ ವಿಚಾರಣೆಯನ್ನು ಆಲಿಸಿತು.

ಆರ್‌ಬಿಐ ತನ್ನ ಅಫಿಡವಿಟ್‌ನಲ್ಲಿ, ಬಡ್ಡಿ ಮೇಲಿನ ಯಾವುದೇ ಬಡ್ಡಿ (ಚಕ್ರಬಡ್ಡಿ) ಮನ್ನಾ ಮಾಡುವುದರಿಂದ ಬ್ಯಾಂಕುಗಳ ಮೇಲೆ ಗಮನಾರ್ಹವಾದ ಆರ್ಥಿಕ ವೆಚ್ಚಗಳು ಉಂಟಾಗುತ್ತವೆ ಮತ್ತು ಇದು ಠೇವಣಿದಾರರು ಮತ್ತು ವ್ಯಾಪಕವಾದ ಆರ್ಥಿಕ ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದು ಸೂಚಿಸಿತ್ತು.

ಕಳೆದ ವರ್ಷ ನವೆಂಬರ್ 5 ರೊಳಗೆ ಮಾರ್ಚ್ ಮತ್ತು ಆಗಸ್ಟ್ ನಡುವೆ ಬಾಕಿ ಇರುವ ಅರ್ಹ ಸಾಲಗಳನ್ನು 2 ಕೋಟಿ ರೂ.ವರೆಗೆ ಮರುಪಾವತಿ ಮಾಡಿದರೆ, ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯಲ್ಲಿನ ವ್ಯತ್ಯಾಸವನ್ನು ಪಡೆಯದಂತೆ ಕೇಂದ್ರ ಬ್ಯಾಂಕ್ ಈ ಹಿಂದೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿತ್ತು.

ಸಾಲ ಪರಿಹಾರವು ವೈಯಕ್ತಿಕ, ವಸತಿ, ಶಿಕ್ಷಣ, ಆಟೋ ಮತ್ತು ಗ್ರಾಹಕ ಸಾಲಗಳು, ಅತ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸಾಲಗಳಿಗೆ ಅನ್ವಯವಾಗಿತ್ತು.
ಸಾಲಗಾರನು ಪರಿಹಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಆರಿಸಿದ್ದಾನೆಯೇ ಎಂಬುದನ್ನು ಲೆಕ್ಕಿಸದೆ ಸಾಲವನ್ನು ತುಂಬಲು ಮತ್ತು ಡಿಸೆಂಬರ್ 15 ರೊಳಗೆ ಸರ್ಕಾರದಿಂದ ಮರುಪಾವತಿ ಪಡೆಯಲು ಸೂಚಿಸಲಾಗಿತ್ತು.

6,500 ಕೋಟಿ ರೂ. ಅಂದಾಜು ಮಾಡಲಾದ ಯೋಜನೆಯ ವೆಚ್ಚವನ್ನು ಭರಿಸಲು ಸರ್ಕಾರ ನಿರ್ಧರಿಸಿದೆ. ಇದು ಆರು ತಿಂಗಳ ಅವಧಿಗೆ ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯ ನಡುವಿನ ವ್ಯತ್ಯಾಸವನ್ನು ನಂತರದಲ್ಲಿ ಸರ್ಕಾರ ಭರಿಸಬೇಕು ನಿಯಮ ಮಾಡಲಾಗಿತ್ತು.

ಸಾಂಕ್ರಾಮಿಕ ರೋಗದ ಕಾರಣದಿಂದ ಮಾರ್ಚ್ 1, 2020 ಮತ್ತು ಮೇ 31,2020 ರ ನಡುವೆ ಸಾಲದ ಕಂತುಗಳನ್ನು ಪಾವತಿಸಲು ವಿನಾಯತಿ ನೀಡಿ ಮಾರ್ಚ್ 27 ರಂದು ಆರ್‌ಬಿಐ ಸುತ್ತೋಲೆ ಹೊರಡಿಸಿತ್ತು. ಇದನ್ನು ನಂತರ ಆಗಸ್ಟ್ 31 ರವರೆಗೆ ವಿಸ್ತರಿಸಲಾಯಿತು.
ಸುಪ್ರಿಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರ್ಧರಿಸದ ಕಾರಣ ಆರ್‌ಬಿಐನ ಸಾಲ ಮರುಪಾವತಿ ವಿನಾಯತಿ ಅವಧಿಯನ್ನು ವಿಸ್ತರಿಸದಿರುವ ನಿಲುವಿಗೆ ಗೆಲುವು ಸಿಕ್ಕಮತಾಗಿದೆ.


ಇದನ್ನೂ ಓದಿ; ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...