Homeಮುಖಪುಟಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಕಾರಣ ಆರ್‌ಬಿಐ ತನ್ನ ನಿಲುವಿನಂತೆ ಸಾಲ ಮರುಪಾವತಿ ವಿನಯತಿ ಯೋಜನೆಯನ್ನು ವಿಸ್ತರಿಸಲಾರದು/ ಕೇಂದ್ರದ ನಿಲುವು ಇದೇ ಆಗಿತ್ತು.

- Advertisement -
- Advertisement -

ಹಣಕಾಸು ಮತ್ತು ಆರ್ಥಿಕ ಆರೋಗ್ಯದ ವಿಷಯಗಳ ಬಗ್ಗೆ ತಾನು ಪರಿಣತಿಯನ್ನು ಹೊಂದಿಲ್ಲ ಎಂದಿರುವ ಸುಪ್ರೀಂಕೋರ್ಟ್ ಸಾಲ ಪರಿಹಾರ ನೀತಿಯಲ್ಲಿ ಹಸ್ತಕ್ಷೇಪ ಮಾಡಲು ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಷಾ ಅವರ ಸುಪ್ರೀಂ ಕೋರ್ಟ್ ನ್ಯಾಯಪೀಠವು ಲಕ್ಷಾಂತರ ಜನರಿಗೆ ಪರಿಹಾರ ನೀಡುವಂತಹ ಒಂದು ಕ್ರಮದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ನಿಮಿತ್ತ ಸಾಲಗಳ ಮೇಲಿನ ಬಡ್ಡಿ ಪಾವತಿಗಳನ್ನು ಮನ್ನಾ ಮಾಡಬೇಕೆ ಎಂಬ ಅರ್ಜಿಯ ವಿಚಾರಣೆಯನ್ನು ಆಲಿಸಿತು.

ಆರ್‌ಬಿಐ ತನ್ನ ಅಫಿಡವಿಟ್‌ನಲ್ಲಿ, ಬಡ್ಡಿ ಮೇಲಿನ ಯಾವುದೇ ಬಡ್ಡಿ (ಚಕ್ರಬಡ್ಡಿ) ಮನ್ನಾ ಮಾಡುವುದರಿಂದ ಬ್ಯಾಂಕುಗಳ ಮೇಲೆ ಗಮನಾರ್ಹವಾದ ಆರ್ಥಿಕ ವೆಚ್ಚಗಳು ಉಂಟಾಗುತ್ತವೆ ಮತ್ತು ಇದು ಠೇವಣಿದಾರರು ಮತ್ತು ವ್ಯಾಪಕವಾದ ಆರ್ಥಿಕ ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದು ಸೂಚಿಸಿತ್ತು.

ಕಳೆದ ವರ್ಷ ನವೆಂಬರ್ 5 ರೊಳಗೆ ಮಾರ್ಚ್ ಮತ್ತು ಆಗಸ್ಟ್ ನಡುವೆ ಬಾಕಿ ಇರುವ ಅರ್ಹ ಸಾಲಗಳನ್ನು 2 ಕೋಟಿ ರೂ.ವರೆಗೆ ಮರುಪಾವತಿ ಮಾಡಿದರೆ, ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯಲ್ಲಿನ ವ್ಯತ್ಯಾಸವನ್ನು ಪಡೆಯದಂತೆ ಕೇಂದ್ರ ಬ್ಯಾಂಕ್ ಈ ಹಿಂದೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿತ್ತು.

ಸಾಲ ಪರಿಹಾರವು ವೈಯಕ್ತಿಕ, ವಸತಿ, ಶಿಕ್ಷಣ, ಆಟೋ ಮತ್ತು ಗ್ರಾಹಕ ಸಾಲಗಳು, ಅತ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸಾಲಗಳಿಗೆ ಅನ್ವಯವಾಗಿತ್ತು.
ಸಾಲಗಾರನು ಪರಿಹಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಆರಿಸಿದ್ದಾನೆಯೇ ಎಂಬುದನ್ನು ಲೆಕ್ಕಿಸದೆ ಸಾಲವನ್ನು ತುಂಬಲು ಮತ್ತು ಡಿಸೆಂಬರ್ 15 ರೊಳಗೆ ಸರ್ಕಾರದಿಂದ ಮರುಪಾವತಿ ಪಡೆಯಲು ಸೂಚಿಸಲಾಗಿತ್ತು.

6,500 ಕೋಟಿ ರೂ. ಅಂದಾಜು ಮಾಡಲಾದ ಯೋಜನೆಯ ವೆಚ್ಚವನ್ನು ಭರಿಸಲು ಸರ್ಕಾರ ನಿರ್ಧರಿಸಿದೆ. ಇದು ಆರು ತಿಂಗಳ ಅವಧಿಗೆ ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯ ನಡುವಿನ ವ್ಯತ್ಯಾಸವನ್ನು ನಂತರದಲ್ಲಿ ಸರ್ಕಾರ ಭರಿಸಬೇಕು ನಿಯಮ ಮಾಡಲಾಗಿತ್ತು.

ಸಾಂಕ್ರಾಮಿಕ ರೋಗದ ಕಾರಣದಿಂದ ಮಾರ್ಚ್ 1, 2020 ಮತ್ತು ಮೇ 31,2020 ರ ನಡುವೆ ಸಾಲದ ಕಂತುಗಳನ್ನು ಪಾವತಿಸಲು ವಿನಾಯತಿ ನೀಡಿ ಮಾರ್ಚ್ 27 ರಂದು ಆರ್‌ಬಿಐ ಸುತ್ತೋಲೆ ಹೊರಡಿಸಿತ್ತು. ಇದನ್ನು ನಂತರ ಆಗಸ್ಟ್ 31 ರವರೆಗೆ ವಿಸ್ತರಿಸಲಾಯಿತು.
ಸುಪ್ರಿಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರ್ಧರಿಸದ ಕಾರಣ ಆರ್‌ಬಿಐನ ಸಾಲ ಮರುಪಾವತಿ ವಿನಾಯತಿ ಅವಧಿಯನ್ನು ವಿಸ್ತರಿಸದಿರುವ ನಿಲುವಿಗೆ ಗೆಲುವು ಸಿಕ್ಕಮತಾಗಿದೆ.


ಇದನ್ನೂ ಓದಿ; ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...