Homeಮುಖಪುಟಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಕಾರಣ ಆರ್‌ಬಿಐ ತನ್ನ ನಿಲುವಿನಂತೆ ಸಾಲ ಮರುಪಾವತಿ ವಿನಯತಿ ಯೋಜನೆಯನ್ನು ವಿಸ್ತರಿಸಲಾರದು/ ಕೇಂದ್ರದ ನಿಲುವು ಇದೇ ಆಗಿತ್ತು.

- Advertisement -
- Advertisement -

ಹಣಕಾಸು ಮತ್ತು ಆರ್ಥಿಕ ಆರೋಗ್ಯದ ವಿಷಯಗಳ ಬಗ್ಗೆ ತಾನು ಪರಿಣತಿಯನ್ನು ಹೊಂದಿಲ್ಲ ಎಂದಿರುವ ಸುಪ್ರೀಂಕೋರ್ಟ್ ಸಾಲ ಪರಿಹಾರ ನೀತಿಯಲ್ಲಿ ಹಸ್ತಕ್ಷೇಪ ಮಾಡಲು ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಷಾ ಅವರ ಸುಪ್ರೀಂ ಕೋರ್ಟ್ ನ್ಯಾಯಪೀಠವು ಲಕ್ಷಾಂತರ ಜನರಿಗೆ ಪರಿಹಾರ ನೀಡುವಂತಹ ಒಂದು ಕ್ರಮದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ನಿಮಿತ್ತ ಸಾಲಗಳ ಮೇಲಿನ ಬಡ್ಡಿ ಪಾವತಿಗಳನ್ನು ಮನ್ನಾ ಮಾಡಬೇಕೆ ಎಂಬ ಅರ್ಜಿಯ ವಿಚಾರಣೆಯನ್ನು ಆಲಿಸಿತು.

ಆರ್‌ಬಿಐ ತನ್ನ ಅಫಿಡವಿಟ್‌ನಲ್ಲಿ, ಬಡ್ಡಿ ಮೇಲಿನ ಯಾವುದೇ ಬಡ್ಡಿ (ಚಕ್ರಬಡ್ಡಿ) ಮನ್ನಾ ಮಾಡುವುದರಿಂದ ಬ್ಯಾಂಕುಗಳ ಮೇಲೆ ಗಮನಾರ್ಹವಾದ ಆರ್ಥಿಕ ವೆಚ್ಚಗಳು ಉಂಟಾಗುತ್ತವೆ ಮತ್ತು ಇದು ಠೇವಣಿದಾರರು ಮತ್ತು ವ್ಯಾಪಕವಾದ ಆರ್ಥಿಕ ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದು ಸೂಚಿಸಿತ್ತು.

ಕಳೆದ ವರ್ಷ ನವೆಂಬರ್ 5 ರೊಳಗೆ ಮಾರ್ಚ್ ಮತ್ತು ಆಗಸ್ಟ್ ನಡುವೆ ಬಾಕಿ ಇರುವ ಅರ್ಹ ಸಾಲಗಳನ್ನು 2 ಕೋಟಿ ರೂ.ವರೆಗೆ ಮರುಪಾವತಿ ಮಾಡಿದರೆ, ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯಲ್ಲಿನ ವ್ಯತ್ಯಾಸವನ್ನು ಪಡೆಯದಂತೆ ಕೇಂದ್ರ ಬ್ಯಾಂಕ್ ಈ ಹಿಂದೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿತ್ತು.

ಸಾಲ ಪರಿಹಾರವು ವೈಯಕ್ತಿಕ, ವಸತಿ, ಶಿಕ್ಷಣ, ಆಟೋ ಮತ್ತು ಗ್ರಾಹಕ ಸಾಲಗಳು, ಅತ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸಾಲಗಳಿಗೆ ಅನ್ವಯವಾಗಿತ್ತು.
ಸಾಲಗಾರನು ಪರಿಹಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಆರಿಸಿದ್ದಾನೆಯೇ ಎಂಬುದನ್ನು ಲೆಕ್ಕಿಸದೆ ಸಾಲವನ್ನು ತುಂಬಲು ಮತ್ತು ಡಿಸೆಂಬರ್ 15 ರೊಳಗೆ ಸರ್ಕಾರದಿಂದ ಮರುಪಾವತಿ ಪಡೆಯಲು ಸೂಚಿಸಲಾಗಿತ್ತು.

6,500 ಕೋಟಿ ರೂ. ಅಂದಾಜು ಮಾಡಲಾದ ಯೋಜನೆಯ ವೆಚ್ಚವನ್ನು ಭರಿಸಲು ಸರ್ಕಾರ ನಿರ್ಧರಿಸಿದೆ. ಇದು ಆರು ತಿಂಗಳ ಅವಧಿಗೆ ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯ ನಡುವಿನ ವ್ಯತ್ಯಾಸವನ್ನು ನಂತರದಲ್ಲಿ ಸರ್ಕಾರ ಭರಿಸಬೇಕು ನಿಯಮ ಮಾಡಲಾಗಿತ್ತು.

ಸಾಂಕ್ರಾಮಿಕ ರೋಗದ ಕಾರಣದಿಂದ ಮಾರ್ಚ್ 1, 2020 ಮತ್ತು ಮೇ 31,2020 ರ ನಡುವೆ ಸಾಲದ ಕಂತುಗಳನ್ನು ಪಾವತಿಸಲು ವಿನಾಯತಿ ನೀಡಿ ಮಾರ್ಚ್ 27 ರಂದು ಆರ್‌ಬಿಐ ಸುತ್ತೋಲೆ ಹೊರಡಿಸಿತ್ತು. ಇದನ್ನು ನಂತರ ಆಗಸ್ಟ್ 31 ರವರೆಗೆ ವಿಸ್ತರಿಸಲಾಯಿತು.
ಸುಪ್ರಿಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರ್ಧರಿಸದ ಕಾರಣ ಆರ್‌ಬಿಐನ ಸಾಲ ಮರುಪಾವತಿ ವಿನಾಯತಿ ಅವಧಿಯನ್ನು ವಿಸ್ತರಿಸದಿರುವ ನಿಲುವಿಗೆ ಗೆಲುವು ಸಿಕ್ಕಮತಾಗಿದೆ.


ಇದನ್ನೂ ಓದಿ; ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....